ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಕಲ ಕಲಾ ವಲ್ಲಭ “ಬಹದ್ದೂರ್” ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ರ ನೆನಪು…

admin by admin
February 20, 2020
in International, Newsbeat, Politics, Samagra karnataka, Sports
Share on FacebookShare on TwitterShare on WhatsappShare on Telegram

ಅದು 1953 ಜನವರಿ 20 ಮೈಸೂರಿನ ಸಂಸ್ಥಾನಕ್ಕೆ ವಾರಸುದಾರನೊಬ್ಬನ ಜನನವಾಗಿತ್ತು. ಶ್ರೀಮಂತಿಕೆಯ ಅರಸೊತ್ತಿಗೆಯಲ್ಲಿ ಸಾಮಾನ್ಯನಂತೆ ಬದುಕುವ ರಾಜನೊಬ್ಬನ ಜನನವಾಗಿತ್ತು. ಅವರೇ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್. ತಂದೆ ಜಯಚಾಮರಾಜೇಂದ್ರ ಒಡೆಯರ್, ತಾಯಿ ತ್ರಿಪುರ ಸುಂದರಿ ಅಮ್ಮಣ್ಣಿ ದಂಪತಿಯ ಏಕೈಕ ಪುತ್ರ. ಹೆಸರೆ ಸೂಚಿಸುವಂತೆ ಮೈಸೂರಿನ ಒಡೆಯರ್ ಆಡಳಿತದ ಇತಿಹಾಸದಲ್ಲಿ ವಿಶಿಷ್ಟ ಸ್ವಭಾವವನ್ನು ಹೊಂದಿದ್ದ ಅರಸರು ಇವರು. ಶ್ರೀಮಂತ ಅರಸು ಕುಟುಂಬದಲ್ಲಿ ಹುಟ್ಟಿದ್ರೂ ಸಾಮಾನ್ಯನಂತೆ ಬದುಕಿದವರು. ತನಗಿರುವ ಅಧಿಕಾರವನ್ನು ಬದಿಗಿಟ್ಟು, ಸಾಮಾನ್ಯ ಪ್ರಜೆಯಂತೆ ಬದುಕುವುದು ಹೇಗೆ ಎಂದು ಇಡೀ ಸಮಾಜಕ್ಕೆ ತಿಳಿಸಿಕೊಟ್ಟ ಮಹಾನ್ ವ್ಯಕ್ತಿ. ಬೆಳೆದದ್ದು ರಾಜ ಮನೆತನದಲ್ಲಿ ಎನ್ನುವ ಅಹಂ ಇಲ್ಲದೆ, ದೇಶ ವಿದೇಶಗಳನ್ನು ಸುತ್ತಿ ಹಲವು ವಿದ್ಯೆಗಳನ್ನು ಕಲಿತ ಸಕಲ ಕಲಾ ವಲ್ಲಭ ಎನಿಸಿಕೊಂಡ ಕ್ರೀಡಾಪಟು ಸಹ ಆಗಿದ್ದರು. ರಾಜ ಮನೆತನದ ಆಳ್ವಿಕೆ ಹಾಗೂ ಪ್ರಜಾಪ್ರಭುತ್ವದ ಸಂಪರ್ಕದ ಕೊಂಡಿಯಾಗಿದ್ದ ಅರಸರೊಬ್ಬರ ಜನ್ಮದಿನವಾಗಿದೆ ಈ ದಿನ.

ಶೈಕ್ಷಣಿಕ ಜೀವನ.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಬಾಲ್ಯದ ಶಿಕ್ಷಣವನ್ನು ಪಡೆದಿದ್ದು ಮೈಸೂರಿನಲ್ಲಿ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ ಇವರು ಅದೇ ವಿವಿಯಲ್ಲಿ ರಾಜ್ಯಶಾಸ್ತ್ರ ಹಾಗೂ ಹಿಂದಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ನಂತರ ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಇವರು ಪಾಶ್ಚಾತ್ಯ ಹಾಗೂ ಶಾಸ್ತ್ರೀಯ ಸಂಗೀತದ ಮೇಲೆ ವಿಶೇಷ ಆಸಕ್ತಿ ಹೊಂದಿದ್ದರು. ಪಿಯಾನೋ ಸಂಗೀತದ ಮೇಲೆ ಆಸಕ್ತಿ ಹೊಂದಿದ್ದ ಒಡೆಯರ್ ಲಂಡನ್ನಿನ ಟ್ರಿನಿಟಿ ಕಾಲೇಜಿನಲ್ಲಿ ಪದವಿ ಪಡೆದರು. ಮಹಾನ್ ದೈವ ಭಕ್ತರಾಗಿದ್ದ ಒಡೆಯರ್ ದೇಶಿಯ ಸಂಸ್ಕೃತಿ, ಕಲೆ ಸಾಹಿತ್ಯದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದರು.

೩೧ ನೇ ವಯಸ್ಸಿಗೆ ರಾಜಕೀಯ ಪ್ರವೇಶ.

ಅದಾಗಲೇ ಪ್ರಜಾಪ್ರಭುತ್ವ ಜಾರಿಯಾಗಿದ್ದರಿಂದ ಅರಸೊತ್ತಿಗೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದ ಕಾಲವದು. ರಾಜನ ಅಧಿಕಾರವನ್ನು ಪ್ರಜೆಗಳು ಕೈಗೆ ಕೊಡಿಸುವ ಕೆಲಸ ಅದಾಗಲೇ ನಡರದು ಹೋಗಿತ್ತು. ಒಡೆಯರ್ ಸಹ ಅದಾಗಲೇ ಸಕ್ರಿಯ ರಾಜಕಾರಣಿಯಾಗಲು ನಿರ್ಧಾರ ಮಾಡಿದ್ದರು. ತನ್ನ ೩೧ ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷದಿಂದ ೧೯೮೪ ರಿಂದ ೧೯೯೯ ವರೆಗೆ ಮೈಸೂರು ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡಿದರು. ನಂತರ ‌೧೯೯೧ ರಲ್ಲಿ ಬಿಜೆಪಿ ಸೇರಿದ ಒಡೆಯರ್ ಚಂದ್ರಪ್ರಭ ಅರಸ್ ವಿರುದ್ಧ ಸೋಲನ್ನು ಕಂಡರು.

ರಾಜನಾಗಿದ್ದರೂ ತಪ್ಪಲಿಲ್ಲ ಕಾನೂನು ಹೋರಾಟ…!

ಅದು ೧೯೯೬ ರ ಜೆ.ಹೆಚ್ ಪಟೇಲರ ಸರ್ಕಾರದ ಆಡಳಿತ ದಿನಗಳು. ಒಡೆಯರ ಖಾಸಗಿ ಸ್ವತ್ತಾಗಿದ್ದ ಬೆಂಗಳೂರು ಹಾಗೂ ಮೈಸೂರು ಅರಮನೆಗಳನ್ನು ಸರ್ಕಾದ ವಶಕ್ಕೆ ಪಡೆಯಲಾಯಿತು. ಈ ಕ್ರಮದಿಂದಾಗಿ ತೀವ್ರವಾಗಿ ನೊಂದ ಅರಸರು ಕಾನೂನು ಹೋರಾಟಕ್ಕಾಗಿ ಕೋರ್ಟ್ ಬಾಗಿಲು ತಟ್ಟಬೇಕಾಯಿತು. ಅರಸರ ಬದುಕಿನ ನಂತರ ಸ್ವಾಧೀನಕ್ಕೆ ಪಡೆಯಬೇಕಿದ್ದ ಆಸ್ತಿಯ ಮೇಲೆ ಅವರಿದ್ದಾಗಲೇ ಸರ್ಕಾರ ಕಣ್ಣು ಹಾಕಿತ್ತು.
ರಾಜನಾಗಿದ್ದರೂ ರಾಜಕೀಯ ಸೋಲು ಗೆಲುವುಗಳ‌ ಮದ್ಯೆ ಕಾನೂನೂ ಹೋರಾಟ ಮಾಡಲೇ ಬೇಕಾದ ಪರಿಸ್ಥಿತಿಗೆ ಒಡೆಯರ್ ತಲುಪಿದರು. ಒಟ್ಟಿನಲ್ಲಿ ಕಾನೂನು ಮಾಡಬೇಕಿದ್ದ ರಾಜನೇ ತನ್ನ ಹಕ್ಕುಗಳಿಗಾಗಿ ಕಾನೂನು ಹೋರಾಟ ಮಾಡಬೇಕಾಯಿತು.

ಸಕಲ ಕಲಾ ವಲ್ಲಭ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್.

ಕಲೆ, ಸಾಹಿತ್ಯ, ಸಂಗೀತದಲ್ಲಿ‌ ವಿಶೇಷ ಆಸಕ್ತಿ ಹೊಂದಿದ್ದ ಒಡೆಯರ್, ಸಕ್ರಿಯ ರಾಜಕಾರಣದಿಂದ ಹೊರಹೋಗಿ ಮೈಸೂರು ವಿವಿಯ ಕ್ರಿಕೆಟ್ ತಂಡದ ಪರ ವೇಗದ ಬೌಲರ್ ಆಗಿ ಕಾಣಿಸಿಕೊಂಡರು. ಸಹ ಆಟಗಾರರ ಜೊತೆಗೆ ಸರಳ ನಡತೆಯಿಂದಲೇ ಹೆಸರು ಗಳಿಸಿದ್ದರು. ೨೦೦೭ ಹಾಗೂ ೨೦೧೩ರಲ್ಲಿ ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅಲ್ಲದೇ ಗಾಲ್ಫ್, ಕುದುರೆ ರೇಸ್ ನಲ್ಲಿ ಸಕ್ರಿಯರಾಗಿ ದಿಲ್ಲಿ ಟರ್ಫ್ ಕ್ಲಬ್ ನ ಸದಸ್ಯರು ಆಗಿದ್ದರು. ನಂತರ ಪುತ್ರ ಸಂತಾನವಿಲ್ಲದ ಇವರು ೨೦೧೩ ರಂದು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ‌ ಕೊನೆಯುಸಿರೆಳೆದರು. ಒಟ್ಟಿನಲ್ಲಿ ಅರಸೊತ್ತಿಗೆ ಮತ್ತು ಪ್ರಜಾಪ್ರಭುತ್ವ ಪದ್ದತಿಯ ಮದ್ಯೆ ಸಂಪರ್ಕದ ಕೊಂಡಿಯಾಗಿ ಹಲವು ಏಳು-ಬೀಳುಗಳನ್ನು ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕಂಡಿದ್ದರು ಎಂದರೆ ತಪ್ಪಾಗಲಾರದು.

Tags: Mysore MaharajaShri Kantadatta Narasimharaja Wodeyar
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram