ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯ, ತಲಕಾಡು, ಮೈಸೂರು – ಇತಿಹಾಸ ಮತ್ತು ಮಹಿಮೆ

Sri Vaidyanatheshwara Swamy Temple, Talakadu, Mysore - History and Glory

Shwetha by Shwetha
May 19, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ತಲಕಾಡು ಮೈಸೂರು ಜಿಲ್ಲೆಯ ಒಂದು ಪುರಾತನ ಪಟ್ಟಣ. ಕಾವೇರಿ ನದಿಯ ದಡದಲ್ಲಿರುವ ಈ ಸ್ಥಳವು ಒಂದು ಕಾಲದಲ್ಲಿ ಪ್ರಮುಖ ವಾಣಿಜ್ಯ ಮತ್ತು ಧಾರ್ಮಿಕ ಕೇಂದ್ರವಾಗಿತ್ತು.

ಎತ್ತ ನೋಡಿದರತ್ತ ಮರಳರಾಶಿ, ಗಗನಚುಂಬಿಸುವ೦ಥ ಮರಳಗುಡ್ಡೆಗಳು, ಊರು ತುಂಬ ಮರಳಿನದೇ ರಂಗವಲ್ಲಿ. ಗುಡಿ-ಗೋಪುರಗಳು, ಮನೆಮಠಗಳು, ಕಾಡು-ಮೇಡುಗಳು, ನಡೆವ ರಸ್ತೆ ಎಲ್ಲಕ್ಕೂ ಮರಳಿನದೇ ನಂಟು. ಇದು ತಲಕಾಡಿನ ಪರಿ. ಕಾಲಿಟ್ಟಲ್ಲಿ ಮರಳು ಕೈಚಾಚಿದಲ್ಲಿ ಮರಳು! ಇದು ತಲಕಾಡು ಇರುವ ರೀತಿ. ಇದರ ಹಿಂದೊಂದು ಶಾಪದ ಕಥೆ ಹೀಗಿದೆ. ಶ್ರೀರಂಗರಾಯ ವಿಜಯನಗರದ ಪ್ರತಿನಿಧಿಯಾಗಿ ಶ್ರೀರಂಗಪಟ್ಟಣದಲ್ಲಿ ಆಳುತ್ತಿದ್ದ ಕಾಲದಲ್ಲಿ ಆತನಿಗೆ ಬೆನ್ನುಫಣಿ ರೋಗ ಬರುತ್ತದೆ. ಅದರ ನಿವಾರಣೆಗಾಗಿ ಆತ ತನ್ನ ಪತ್ನಿ ಅಲಮೇಲಮ್ಮನ ಜೊತೆ ತಲಕಾಡಿನ ಶ್ರೀ ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಪೂಜೆಗಾಗಿ ಬರುತ್ತಾನೆ. ಆ ಸಂದರ್ಭದಲ್ಲಿ ರೋಗ ಉಲ್ಬಣಗೊಂಡು ಶ್ರೀರಂಗರಾಯ ತಲಕಾಡಿನಲ್ಲೇ ಸಾವಿಗೀಡಾಗುತ್ತಾನೆ. ಈ ಸಂದರ್ಭ ಉಪಯೋಗಿಸಿಕೊಂಡು ಮೈಸೂರಿನ ರಾಜಒಡೆಯರು ಶ್ರೀರಂಗಪಟ್ಟಣವನ್ನು ಆಕ್ರಮಿಸಿಕೊಳ್ಳುತ್ತಾರೆ. ಆಗ ಶ್ರೀರಂಗರಾಯನ ಪತ್ನಿ ಅಲಮೇಲಮ್ಮ ತಲಕಾಡಿನ ಪಕ್ಕದಲ್ಲಿರುವ ಮಾಲಂಗಿ ಗ್ರಾಮದಲ್ಲಿ ನೆಲೆಸುತ್ತಾಳೆ. ಆದರೆ ಅಮೂಲ್ಯವಾದ ಮುತ್ತಿನ ಮೂಗುತಿಯೊಂದು ಸೇರಿದಂತೆ ಎಲ್ಲಾ ಒಡವೆಗಳನ್ನು ಕಿತ್ತುಕೊಳ್ಳಲು ರಾಜಒಡೆಯರು ಪ್ರಯತ್ನಿಸಿದಾಗ ಕೋಪಗೊಂಡ ಅಲಮೇಲಮ್ಮ ತಲಕಾಡು ಮರಳಾಗಿ ಮಾಲಂಗಿ ಮಡುವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ ಎಂದು ಶಾಪ ಹಾಕಿ ಒಡವೆಗಳೊಡನೆ ಕಾವೇರಿ ನದಿಗೆ ಹಾರಿ ಪ್ರಾಣ ಬಿಡುತ್ತಾಳೆ. ತಲಕಾಡು ಪೌರಾಣಿಕವಾಗಿ, ಚಾರಿತ್ರಿಕವಾಗಿ, ಜಾನಪದವಾಗಿ, ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಬಹು ಮಹತ್ವದ ಸ್ಥಳ. ಸಿದ್ದಾರಣ್ಯಕ್ಷೇತ್ರ, ಗಜಾರಣ್ಯಕ್ಷೇತ್ರ, ತಲವನಪುರ, ರಾಜಪುರ ಮುಂತಾದ ಹೆಸರುಗಳಿಂದಲೂ ಪುರಾಣದಲ್ಲಿ, ಇತಿಹಾಸದಲ್ಲಿ ಕರೆಸಿಕೊಂಡಿರುವ ತಲಕಾಡು ಕ್ರಿ.ಶ.247ರ ಕಾಲದಲ್ಲೇ ಗಂಗರಸರ ಸಾಮ್ರಾಜ್ಯದ ರಾಜಧಾನಿಯಾಗಿ ಅಪಾರ ಕೀರ್ತಿ ಗಳಿಸಿ ಮೆರೆದ ಭವ್ಯ ನಾಡಾಗಿತ್ತು. ಗಂಗರಲ್ಲದೆ ಹೊಯ್ಸಳರು, ಚೋಳರು, ರಾಷ್ಟ್ರಕೂಟರು, ವಿಜಯನಗರದರಸರು, ಮೈಸೂರಿನ ಒಡೆಯರು ಮುಂತಾದ ರಾಜ ವಂಶಸ್ಥರ ನಾಡಾಗಿತ್ತು.

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಮಹಿಮೆ:

* ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯವು ತಲಕಾಡಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಇದು ಪಂಚಲಿಂಗ ಕ್ಷೇತ್ರಗಳಲ್ಲಿ ಒಂದಾಗಿದೆ. ಉಳಿದ ನಾಲ್ಕು ಲಿಂಗಗಳು ಪಾತಾಳೇಶ್ವರ, ಮರಳೇಶ್ವರ, ಅರ್ಕೇಶ್ವರ ಮತ್ತು ಮಲ್ಲಿಕಾರ್ಜುನ ದೇವಾಲಯಗಳಲ್ಲಿವೆ. ಈ ಐದು ಲಿಂಗಗಳ ದರ್ಶನವನ್ನು ಪಡೆಯುವುದರಿಂದ ಎಲ್ಲಾ ಪಾಪಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಭಕ್ತರಲ್ಲಿದೆ.

* ಈ ದೇವಾಲಯವು ದ್ರಾವಿಡ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದೆ. ಗರ್ಭಗುಡಿಯ ಪ್ರವೇಶದ್ವಾರದಲ್ಲಿ ಇಬ್ಬರು ದೊಡ್ಡ ದ್ವಾರಪಾಲಕರ ವಿಗ್ರಹಗಳಿವೆ. ದೇವಾಲಯದ ಗೋಡೆಗಳ ಮೇಲೆ ಸುಂದರವಾದ ಕೆತ್ತನೆಗಳಿವೆ.

* ದೇವಾಲಯದ ಆವರಣದಲ್ಲಿ ಗಣೇಶ ಮತ್ತು ನಂದಿಯ ವಿಗ್ರಹಗಳಿವೆ. ಒಳಾಂಗಣದಲ್ಲಿ ದುರ್ಗಾ, ಕಾಳಿ, ನಟರಾಜ, ಭದ್ರಕಾಳಿ ಮತ್ತು ಶಾರದಾ ದೇವಿಯರ ವಿಗ್ರಹಗಳನ್ನು ಕಾಣಬಹುದು.

* ಪ್ರತಿ 12 ವರ್ಷಗಳಿಗೊಮ್ಮೆ ಇಲ್ಲಿ ಪಂಚಲಿಂಗ ದರ್ಶನ ಎಂಬ ವಿಶೇಷ ಉತ್ಸವ ನಡೆಯುತ್ತದೆ. ಈ ಸಮಯದಲ್ಲಿ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ.

ಹೀಗೆ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಾಲಯವು ಐತಿಹಾಸಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದ್ದು, ಅನೇಕ ಭಕ್ತರಿಗೆ ಪವಿತ್ರ ಸ್ಥಳವಾಗಿದೆ.

ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram