SriLanka Crisis – ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರಕ್ಕೆ; ತುರ್ತು ಪರಿಸ್ಥತಿ ಘೋಷಣೆ…
ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್ಗೆ ಪಲಾಯನ ಮಾಡಿದ ಒಂದು ದಿನದ ನಂತರ ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ರನಿಲ್ ವಿಕ್ರಮಸಿಂಘೆ ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆಯುತ್ತಿವೆ.
ಅಧ್ಯಕ್ಷ ಗೋತಬಯ ರಾಜಪಕ್ಸೆ, ಅವರ ಪತ್ನಿ ಮತ್ತು ಇಬ್ಬರು ಅಂಗರಕ್ಷಕರೊಂದಿಗೆ ಶ್ರೀಲಂಕಾದ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್ನ ರಾಜಧಾನಿ ಮಾಲೆ ನಗರಕ್ಕೆ ಹೊರಟಿದ್ದಾರೆ ಎಂದು ವಲಸೆ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ.
ಶ್ರೀಲಂಕಾದ ರಾಜಧಾನಿ ಕೊಲಂಬೊದ ಫ್ಲವರ್ ರೋಡ್ನಲ್ಲಿರುವ ಪ್ರಧಾನಿ ಕಚೇರಿ ಬಳಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಶ್ರೀಲಂಕಾ ಪೊಲೀಸರು ಗುರುವಾರ ಅಶ್ರುವಾಯು ಪ್ರಯೋಗಿಸಿದ್ದಾರೆ. ರಾಜ್ಯ ರಾಜಧಾನಿಯ ಸುತ್ತಲೂ ಬುಧವಾರ ನಡೆದ ಪ್ರತಿಭಟನೆಗಳು ಬಹುತೇಕ ಶಾಂತಿಯುತವಾಗಿದ್ದವು ಎಂದು ಬಿಬಿಸಿ ವರದಿ ಮಾಡಿದೆ.
SriLanka Crisis – PM Ranil Wickremesinghe Takes Over As Acting President