ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ (BJP) ಉಸ್ತುವಾರಿ ರಾಧಾಮೋಹನ ದಾಸ್ (Radha Mohan Das Agarwal) ವಿರುದ್ಧ ಮಾಜಿ ಸಚಿವ ಶ್ರೀರಾಮುಲು (Sriramulu) ಬೇಸರ ವ್ಯಕ್ತಪಡಿಸಿದ್ದಾರೆ.
ಜನಾರ್ದನ ರೆಡ್ಡಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ವಿಜಯೇಂದ್ರ ನನ್ನ ಪರ ಇರಲಿಲ್ಲ. ಹೀಗಾಗಿ ನಿಮಗೆ ಬೇಡವಾದರೆ, ನಾನು ಪಕ್ಷ ಬಿಡುತ್ತೇನೆ ಎಂದಿದ್ದೇನೆ ಎಂದು ಹೇಳಿದ್ದಾರೆ.
ಸಂಡೂರು ಸೋಲಿಗೆ ಶ್ರೀರಾಮುಲು ಕಾರಣ ಎಂದು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಹೈಕಮಾಂಡ್ಗೆ ದೂರು ಕೊಟ್ಟಿದ್ದರು. ಹಗೀಗಾಗಿಈ ಹಿನ್ನೆಲೆಯಲ್ಲಿ ರಾಮುಲು ಅವರಿಗೆ ರಾಧಾ ಮೋಹನದಾಸ್ ಅಗರವಾಲ್ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದರು. ಹೀಗಾಗಿ ಅಸಮಾಧಾನಗೊಂಡಿದ್ದಾರೆ.
ಜನಾರ್ದನ ರೆಡ್ಡಿ (Janardhana Reddy) ಬಿಜೆಪಿ ಸೇರ್ಪಡೆಗೆ ರಾಮುಲು ಅಡ್ಡಗಾಲು ಹಾಕಿದ್ದರು ಎಂಬ ಆರೋಪ ಇತ್ತು. ಈಗ ಇಬ್ಬರು ಸ್ನೇಹಿತರ ಜಗಳ ಹಾದಿ-ಬೀದಿಗೆ ಬಂದಿದೆ.








