ಬೆಳಗಾವಿ: ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಕೊರೊನಾ ಭೀತಿಯ ನಡುವೆಯೇ ಆರಂಭವಾಗಿವೆ. ಆದರೆ, ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ವಡಗಾವಿಯಲ್ಲಿ ನಡೆದಿದೆ.
ನಗರದ ವಡಗಾವಿ ಪ್ರದೇಶದ ಕಲ್ಮೇಶ್ವರ ರಸ್ತೆಯ ಸುಜಾತ ಸುಭಾಷ್ ಡಗೆ ಎಂಬ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಕೊರೊನಾದಿಂದಾಗಿ ಪರೀಕ್ಷೆ ರದ್ದಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಬಾಲಕಿ ನಿನ್ನೆ ತಡರಾತ್ರಿಯವರೆಗೂ ಕಾದು ನೋಡಿದ್ದಾರೆ. ಆದರೆ ಪರೀಕ್ಷೆ ನಡೆದೇ ನಡೆಯುತ್ತದೆ ಎಂದು ಖಾತ್ರಿಯಾದ ಬಳಿಕ ನಿನ್ನೆ ರಾತ್ರಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿದ್ದಾಳಾ ಇಲ್ಲವಾ ಎಂಬುದು ಇನ್ನೂ ಖಚಿತವಾಗಿಲ್ಲ. ಶಹಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








