SSLC ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಆದೇಶ ಹೊರಡಿಸಿದೆ ಈ ರಾಜ್ಯ ..!
ಹೈದರಾಬಾದ್ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ವಿದ್ಯಾರ್ಥಿಗಳಿಗೂ ಅದ್ರಲ್ಲೂ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ತೊಂದರೆಯಾಗಿದೆ.. ಹಲವು ಸಾಮಾಜಿಕ ಹೋರಾಟಗಾರರು ಮಕ್ಕಳ ಹಕ್ಕು ಹೋರಾಟಗಾರರು SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನ ನೇರವಾಗಿ ಪಾಸ್ ಮಾಡುವಂತೆ ಆಗ್ರಹಿಸಿದ್ದಾರೆ.. ಈ ನಡುವೆ ತೆಲಂಗಾಣ ಸರ್ಕಾರ SSLC ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಈ ಬಾರೀ ಪರೀಕ್ಷೆ ಬರೆಯಬೇಕಿದ್ದ 5,21,393 ವಿದ್ಯಾರ್ಥಿಗಳು ಯಾವುದೇ ಪರೀಕ್ಷೆ ಇಲ್ಲದೇ ಪಾಸ್ ಆಗಲಿದ್ದಾರೆ.
ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಆದೇಶದ ಮೇರೆಗೆ ಪರೀಕ್ಷೆಗಳಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನವನ್ನು ಆಧರಿಸಿ ಫಲಿತಾಂಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.