ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಪ್ರತಿಕ್ರಿಯಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, “ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿರುವ ಖಾಯಂ ಶುಶ್ರೂಷಕರ ಸಂಘಕ್ಕೆ ತಿಳಿಸುವುದೇನೆಂದರೆ ನಿಮ್ಮ ವಿವಿಧ ಬೇಡಿಕೆಯ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶೀ ಬಿಎಸ್ವೈ ಜೊತೆ ಚರ್ಚೆ ಮಾಡುತ್ತೇನೆ”.
“ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ. ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ತಕ್ಷಣವೇ ತಾವು ಕಾರ್ಯಪ್ರವೃತ್ತರಾಗಿ. ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡುತ್ತಿದ್ದೇನೆ” ಎದು ಬರೆದುಕೊಂಡಿದ್ದಾರೆ.
ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿರುವ ಖಾಯಂ ಶುಶ್ರೂಷಕರ ಸಂಘಕ್ಕೆ ತಿಳಿಸುವುದೇನೆಂದರೆ ನಿಮ್ಮ ವಿವಿಧ ಬೇಡಿಕೆಯ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶೀ ಬಿಎಸ್ವೈ ಜೊತೆ ಚರ್ಚೆ ಮಾಡುತ್ತೇನೆ 1/2 pic.twitter.com/pNus7bHMu1
— Dr Sudhakar K (@mla_sudhakar) August 1, 2020