ಬೆಂಗಳೂರು: ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸಗೌಡ ಕುರಿತಾದ ಸಿನಿಮಾ ಇದೇ ಯುಗಾದಿ ಹಬ್ಬದಂದು ಸೆಟ್ಟೇರಲಿದೆ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಈ ಸಿನಿಮಾ ಸೆಟ್ಟೆರಲಿದ್ದು, ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆ ಎನ್ನಲಾಗಿದೆ. ನಿರ್ಮಾಪಕ ಲೋಕೇಶ್ ಶೆಟ್ಟಿ ಮುಚ್ಚೂರು ಅವರ ಲೆಮನ್ ಗ್ರಾಸ್ ಸ್ಟುಡಿಯೋ ಪ್ರೊಡಕ್ಷನ್ನಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು ಇದಕ್ಕಾಗಿ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ನೋಂದಾಯಿಸಲಾಗಿದೆ. ಡಾ. ನಿಖಿಲ್ ಮಂಜು ಈ ಚಿತ್ರ ನಿರ್ದೇಶಕರಾಗಿದ್ದು, ತುಮುಲ್ ಬಾಲ್ಯನ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ನಿರ್ದೇಶಕರು ಶ್ರೀನಿವಾಸಗೌಡ ಅವರ ಜೊತೆಗೆ 6 ಕಂಬಳ ಜಾಕಿಗಳನ್ನು ತೆರೆಯ ಮೇಲೆ ತರಲಿದ್ದಾರೆ. ನಿಶಾಂತ್ ಶೆಟ್ಟಿ, ಸುರೇಶ್ ಶೆಟ್ಟಿ ಹುಕ್ಕೇರಿ, ಆನಂದ್ ಇರ್ವತ್ತೂರು, ಆಲದಂಗಡಿ ರವಿಕುಮಾರ್ ಮತ್ತು ಪ್ರವೀಣ್ ಪಣಪಿಲ್ ಇರಲಿದ್ದಾರೆ.
ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....








