ರಾಜ್ಯ ಬಜೆಟ್ | ತೆರಿಗೆ ಇಲಾಖೆಗಳ ಜೊತೆ ಸಿಎಂ ಸಭೆ
ಬೆಂಗಳೂರು : ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದು ತೆರಿಗೆ ಸಂಗ್ರಹಿಸುವ ಇಲಾಖೆಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ, ಸಾರಿಗೆ, ನೊಂದಣಿ ಮತ್ತು ಮುದ್ರಾಂಕ ಇಲಾಖೆ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಈ ಸಭೆಗಳು ನಡೆಯಲಿವೆ.
ಸಭೆಯಲ್ಲಿ ಸಂಬಂಧಿಸಿದ ಇಲಾಖೆ ಗಳ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಬಜೆಟ್ ರೂಪಿಸೋ ಸಂಬಂಧ ಇಲಾಖೆಗಳು ಸಂಗ್ರಹಿಸಿರುವ ತೆರಿಗೆ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಇವತ್ತು ಎಲ್ಲ ಇಲಾಖೆಗಳ ಸಭೆ ಮುಗಿಯುತ್ತೆ. ನಾಳೆ ಬಜೆಟ್ ಸಿದ್ಧತಾ ಸಭೆ ನಡೆಸ್ತೇವೆ.
ಬೇರೆ ಬೇರೆ ಪ್ರಮುಖರ ಜೊತೆ ನಾಳೆ ಸಂಜೆವರೆಗೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.