ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಗಲ್ಲಿಯಿಂದ ದಿಲ್ಲಿಯವರೆಗೆ ಚರ್ಚೆಗಳು ನಡೆಯುತ್ತಿವೆ. ಈ ಗೊಂದಲಗಳಿಗೆ ಹೈಕಮಾಂಡ್ ಆದಷ್ಟು ಬೇಗ ಸ್ಪಷ್ಟನೆ ನೀಡಬೇಕು ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಒತ್ತಾಯಿಸುತ್ತಿದ್ದಾರೆ.
ಸಚಿವ ಶಿವಾನಂದ ಪಾಟೀಲ್ ಅವರ ಬಹಿರಂಗ ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಹೊಸಬರಿಗೆ ಅವಕಾಶ ನೀಡಲು ನಾನು ಸಿದ್ಧ ಎಂದು ಹೇಳುವ ಮೂಲಕ ಅವರು ಸಂಪುಟ ಪುನರ್ ರಚನೆಯ ಮುನ್ಸೂಚನೆ ನೀಡಿದ್ದಾರೆ. ಸದ್ಯ ಬಿ ನಾಗೇಂದ್ರ ಮತ್ತು ಕೆ ಎನ್ ರಾಜಣ್ಣ ಅವರ ಸ್ಥಾನಗಳು ಸೇರಿದಂತೆ ಎರಡು ಸ್ಥಾನಗಳು ಖಾಲಿ ಇವೆ ಎನ್ನಲಾಗುತ್ತಿದೆ.
ಸಚಿವರನ್ನು ಕೈಬಿಡಲು ಮತ್ತು ಹೊಸಬರನ್ನು ಸೇರಿಸಿಕೊಳ್ಳಲು ಹೈಕಮಾಂಡ್ ಕೆಲವು ಕಠಿಣ ಮಾನದಂಡಗಳನ್ನು ಅನುಸರಿಸುತ್ತಿದೆ. ಸಚಿವರ ಕೆಲಸದ ವೈಖರಿ ಪಕ್ಷದ ಚಟುವಟಿಕೆಗಳಲ್ಲಿ ಅವರ ಸಕ್ರಿಯತೆ ಮತ್ತು ವಿರೋಧ ಪಕ್ಷಗಳ ವಿರುದ್ಧ ಅವರು ನಡೆಸುವ ವಾಗ್ದಾಳಿಗಳನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಕೇವಲ ಕಾರ್ಯವೈಖರಿ ಮಾತ್ರವಲ್ಲದೆ ಜಾತಿ ಲೆಕ್ಕಾಚಾರ ಮತ್ತು ಹೈಕಮಾಂಡ್ ಗೆ ಇರುವ ವಿಧೇಯತೆಯೂ ಇಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಸಂಭಾವ್ಯವಾಗಿ ಸಂಕಷ್ಟಕ್ಕೆ ಸಿಲುಕಲಿರುವ 13 ಹಾಲೀ ಸಚಿವರ ಪಟ್ಟಿ ಇಲ್ಲಿದೆ
1 ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ
2 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್
3 ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ
4 ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು
5 ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
6 ಶಿಕ್ಷಣ ಸಚಿವ ಮಧು ಬಂಗಾರಪ್ಪ
7 ಸಮಾಜ ಕಲ್ಯಾಣ ಸಚಿವ ಡಾ ಎಚ್ ಸಿ ಮಹದೇವಪ್ಪ
8 ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್
9 ಪಶುಸಂಗೋಪನೆ ಸಚಿವ ಕೆ ವೆಂಕಟೇಶ್
10 ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್
11 ಪೌರಾಡಳಿತ ಇಲಾಖೆ ಸಚಿವ ರಹೀಂ ಖಾನ್
12 ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ
13 ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್
ಹೊಸದಾಗಿ ಸಚಿವ ಸ್ಥಾನದ ಅದೃಷ್ಟ ಒಲಿಯಬಹುದಾದ ಸಂಭಾವ್ಯ ನಾಯಕರ ಪಟ್ಟಿ
1 ಬಿ ಕೆ ಹರಿಪ್ರಸಾದ್ ವಿಧಾನ ಪರಿಷತ್ ಸದಸ್ಯರು
2 ರೂಪಾ ಶಶಿಧರ್ ಕೆಜಿಎಫ್ ಶಾಸಕರು
3 ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರು
4 ಅನಿಲ್ ಚಿಕ್ಕಮಾದು ಎಚ್ ಡಿ ಕೋಟೆ ಶಾಸಕರು
5 ಯು ಟಿ ಖಾದರ್ ಮಂಗಳೂರು ಶಾಸಕರು ಮತ್ತು ವಿಧಾನಸಭಾ ಸಭಾಧ್ಯಕ್ಷರು
6 ಆರ್ ವಿ ದೇಶಪಾಂಡೆ ಹಳಿಯಾಳ ಶಾಸಕರು
7 ಬೇಳೂರು ಗೋಪಾಲಕೃಷ್ಣ ಸಾಗರ ಶಾಸಕರು
8 ಅಶೋಕ್ ಮಹದೇವಪ್ಪ ಪಟ್ಟಣ್ ರಾಮದುರ್ಗ ಶಾಸಕರು
9 ಟಿ ಬಿ ಜಯಚಂದ್ರ ಶಿರಾ ಶಾಸಕರು
10 ಎಚ್ ಸಿ ಬಾಲಕೃಷ್ಣ ಮಾಗಡಿ ಶಾಸಕರು
ರಾಜ್ಯ ರಾಜಕಾರಣದ ಈ ಮಹತ್ವದ ಬೆಳವಣಿಗೆಗಳು ಮೇ ಹದಿನೈದರೊಳಗೆ ಒಂದು ತಾರ್ಕಿಕ ಅಂತ್ಯಕ್ಕೆ ಬರಲಿವೆ ಎಂದು ನಿರೀಕ್ಷಿಸಲಾಗಿದೆ. ಹಳೆಯ ಮುಖಗಳಿಗೆ ವಿಶ್ರಾಂತಿ ನೀಡಿ ಹೊಸಬರಿಗೆ ಮಣೆ ಹಾಕುವ ಮೂಲಕ ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಬಲಪಡಿಸುವುದು ಹೈಕಮಾಂಡ್ ನ ಮೂಲ ಉದ್ದೇಶವಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್ ರಚನೆಯಾದರೆ ಅದು ರಾಜ್ಯದ ಆಡಳಿತ ಯಂತ್ರದಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ.








