State Congress | “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ”
ಬೆಂಗಳೂರು : “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ” ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಕಾಂಗ್ರೆಸ್, ಪರೀಕ್ಷೆ ಪಾಸ್ ಆಗ್ಬೇಕು ಅಂದ್ರೆ 35 ಮಾರ್ಕ್ಸ್ ಪಡೆಯಬೇಕು! ಬಿಜೆಪಿ ಸರ್ಕಾರದಲ್ಲಿ ಬಿಲ್ ಪಾಸ್ ಆಗ್ಬೇಕು ಅಂದ್ರೆ 40% ಕೊಡಲೇಬೇಕು! ನಿನ್ನೆ ಬಿಜೆಪಿಯವರು ಕಳಿಸಿದ ಬಸ್ಸು “ಡಕೋಟಾ ಇಂಜಿನ್ ಸರ್ಕಾರ, ಬ್ರೇಕ್ ಇಲ್ಲದ ಭ್ರಷ್ಟಾಚಾರ” ಎಂದು ರೋಧಿಸುತ್ತಿತ್ತು! ಕರ್ನಾಟಕ ಈಗ #PayCM ಮುಕ್ತ ರಾಜ್ಯವಾಗಬೇಕಿದೆ.
ಜಾತಿ ಶೀಲ್ಡ್ ಹಿಡಿದು ಕಮಿಷನ್ ಭ್ರಷ್ಟಾಚಾರವನ್ನು ರಕ್ಷಿಸಲು ಬಿಜೆಪಿ ವಿಫಲ ಯತ್ನ ನಡೆಸುತ್ತಿದೆ. ಮಠಗಳ ಅನುದಾನದಲ್ಲೂ 30% ಕಮಿಷನ್ ದೋಚಲಾಗಿದೆ ಎಂದು ಲಿಂಗಾಯತ ಸ್ವಾಮಿಗಳೇ ಆರೋಪಿಸಿದ್ದರು. ಇದು ಲಿಂಗಾಯತರಿಗೆ ಮಾಡಿದ ಅವಮಾನವಲ್ಲವೇ? 40 ಪರ್ಸೆಂಟ್ ಸರ್ಕಾರ ದ್ದು “ಜಾತ್ಯತೀತ ಭ್ರಷ್ಟಾಚಾರ” ಇದರಲ್ಲಿ ಲಿಂಗಾಯತರೂ ಸಂತ್ರಸ್ತರೇ.
https://twitter.com/INCKarnataka/status/1573590561084166146?s=20&t=oPzLrund-A71mOBuFWflXw
40% ಕಮಿಷನ್ನಿಗಾಗಿ ಕಿರುಕುಳ ನೀಡಿ 40 ಪರ್ಸೆಂಟ್ ಸರ್ಕಾರ ಕೊಲೆ ಮಾಡಿದ ಸಂತೋಷ್ ಪಾಟೀಲ್ ಕೂಡ ಲಿಂಗಾಯತ. ಲಿಂಗಾಯತನೊಬ್ಬನ ಜೀವ ತೆಗೆದ ಬಿಜೆಪಿ ಸರ್ಕಾರ ಲಿಂಗಾಯತ ವಿರೋಧಿಯಲ್ಲವೇ? ಕಮಿಷನ್ ಕಿರುಕುಳದ ಸಂತ್ರಸ್ತರಲ್ಲಿ ಲಿಂಗಾಯತ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ಲಿಂಗಾಯತ ವಿರೋಧಿ ಮಾತ್ರವಲ್ಲ, ಇಡೀ ಮನುಕುಲದ ವಿರೋಧಿ.

ಮೊರಾದಾಬಾದ್, ಉತ್ತರಾಖಂಡದಲ್ಲಿ ಯುವತಿಯರೊಂದಿಗೆ ನಡೆದ ಘಟನೆಗಳು ಹೃದಯ ವಿದ್ರಾವಕವಾಗಿವೆ.ಭಾರತ ಐಕ್ಯಾತಾ ಯಾತ್ರೆಯಲ್ಲಿ, ನಾನು ಅನೇಕ ಪ್ರತಿಭಾವಂತ ಸ್ತ್ರೀಯರು, ಯುವತಿಯರನ್ನು ಭೇಟಿಯಾಗುತ್ತಿದ್ದೇನೆ, ಅವರೊಂದಿಗೆ ಚರ್ಚಿಸುತ್ತಿದ್ದೇನೆ. ಒಂದು ವಿಷಯ ಸ್ಪಷ್ಟ, ದೇಶದ ಮಹಿಳೆಯರು ಸುರಕ್ಷಿತವಾಗಿದ್ದಾಗ ಮಾತ್ರ ನಮ್ಮ ದೇಶ ಪ್ರಗತಿಹೊಂದಲು ಸಾಧ್ಯ ಎಂದು ಬರೆದುಕೊಂಡಿದೆ.








