ರಾಜ್ಯ, ದೇಶ-ವಿದೇಶ, ಸಿನಿಮಾ-ಕ್ರೀಡೆ : ಓದಿ ಇಂದಿನ ಟಾಪ್ 10 ಸುದ್ದಿ
1 ಭಾರತದಲ್ಲಿ ಕೊರೊನ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 959 ಮಂದಿ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇಂದಿನ ಪ್ರಕರಣಗೊಂದಿಗೆ ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಬಂದು ನಿಂತಿದೆ.
2 ಬಿಜೆಪಿ ಶಾಸಕರು, ಸಚಿವರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಅನ್ನುವ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದೀಗ ಈ ಸುದ್ದಿಗೆ ಪುಷ್ಟಿ ನೀಡುವ ಘಟನೆವೊಂದು ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಪ್ರವಾಸೋಧ್ಯಮ ಸಚಿವ ಆನಂದ್ ಸಿಂಗ್ ಬೇಟಿ ನೀಡಿದ್ದಾರೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸೋಮವಾರ ಬೆಳಗ್ಗೆ ಸದಾಶಿವ ನಗರದ ಡಿಕೆಶಿ ನಿವಾಸಕ್ಕೆ ಆನಂದ್ ಸಿಂಗ್ ಖಾಸಗಿ ಕಾರಿನಲ್ಲಿ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
3 ಸಿದ್ದರಾಮಯ್ಯ ನೀವೊಬ್ಬರೆ ಗಂಡಸಾ..? ನಿಮಗೆ ಸ್ಪರ್ಧಿಸಲು ಕ್ಷೇತ್ರವೇ ಇಲ್ಲ. ನೀವು ಹೋಗಬೇಕು ಅಂದುಕೊಳ್ತಿರೋ ಕ್ಷೇತ್ರದಲ್ಲಿ ಗಂಡಸರು ಯಾರು ಇಲ್ಲವಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ವಾಗ್ದಾಳಿ ಮುಂದುವರೆಸಿದ್ದಾರೆ . ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
4 ಫೆಬ್ರವರಿ 6 ರಂದು ಮೊಟೆರಾ ಮೈದಾನದಲ್ಲಿ ವಿಂಡೀಸ್ ವಿರುದ್ಧದ ನಡೆಯುವ ಮೊದಲ ಏಕದಿನ ಪಂದ್ಯದೊಂದಿಗೆ ಏಕದಿನ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಲಿದೆ. ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡಕ್ಕೆ ಸಾಧ್ಯವಾಗದ 1000ನೇ ಏಕದಿನ ಮೈಲುಗಲ್ಲು ಈ ಪಂದ್ಯದ ಮೂಲಕ ಭಾರತ ತಲುಪಲಿದೆ. ಇದುವರೆಗೆ 999 ಏಕದಿನ ಪಂದ್ಯಗಳನ್ನಾಡಿರುವ ಭಾರತ, ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ಹೊಸ ಅಧ್ಯಾಯ ಬರೆಯಲಿದೆ.
5 Election Breaking – ಫೆ.11 ರ ವರೆಗೂ ಚುನಾವಣಾ ರ್ಯಾಲಿ ನಿರ್ಬಂಧಿಸಿದ ಆಯೋಗ
ನವದೆಹಲಿ: ಕೋವಿಡ್-ಸಂಬಂಧಿತ ಮುನ್ನೆಚ್ಚರಿಕೆಗಳನ್ನು ಮುಂದುವರಿಸುವ ಅಗತ್ಯವನ್ನು ಉಲ್ಲೇಖಿಸಿ ಭಾರತ ಚುನಾವಣಾ ಆಯೋಗವು (ಇಸಿಐ) ಸೋಮವಾರ ಐದು ಚುನಾವಣೆಯ ರಾಜ್ಯಗಳಲ್ಲಿ ರೋಡ್ಶೋಗಳು, ಮೆರವಣಿಗೆಗಳು, ಸೈಕಲ್ ಮತ್ತು ಬೈಕ್ ರ್ಯಾಲಿಗಳು ಮತ್ತು ಮೆರವಣಿಗೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 11 ರವರೆಗೆ ವಿಸ್ತರಿಸಿದೆ.
6 ಅಖಿಲೇಶ್ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ- ವರ್ಚುಯಲ್ ರ್ಯಾಲಿಯಲ್ಲಿ ಮೋದಿ ವಾಗ್ದಾಳಿ.
ಅಖಿಲೇಶ್ ಯಾದವ್ ಅವರಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಗ ಚುನಾವಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ರ್ಯಾಲಿ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ವಿಪಕ್ಷಗಳು ಮುಂದಾಗಿವೆ. ಅದಕ್ಕಾಗಿ ಮತದಾರರನ್ನ ಪ್ರೇರೇಪಿಸುತ್ತಿವೆ ಎಂದು ಟೀಕೆ ಮಾಡಿದರು.
7 ರಾಜ್ಯಪಾಲರನ್ನ ಟ್ವಿಟರ್ ನಲ್ಲಿ ಬ್ಲಾಕ್ ಮಾಡಿದ ಮಮತಾ ಬ್ಯಾನರ್ಜಿ
ರಾಜ್ಯಪಾಲ ಜಗದೀಪ್ ಧನಕರ್ ಅವರ ಅವರ ಪೋಸ್ಟ್ಗಳಿಂದ ವಿಚಲಿತರಾದ ಕಾರಣ ಅವರನ್ನು ಟ್ವಿಟರ್ನಲ್ಲಿ ನಿರ್ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರ ಮೆಲೆ ಕಟು ಟೀಕಾಕಾರರಾಗಿರುವ ರಾಜ್ಯಪಾಲರು “ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಮಮತ ಹೇಳಿದರು.
8 ಮತ್ತೊಮ್ಮೆ ಭೀಮ್ಲಾ ನಾಯಕ್ ಸಿನಿಮಾದ ರಿಲೀಸ್ ಪೋಸ್ಟ್ ಪೋನ್ ಆಗುತ್ತಿದೆ ಎಂಬ ಸುದ್ದಿ ಟಾಲಿವುಡ್ ನಲ್ಲಿ ಜೋರಾಗಿ ಸೌಂಡ್ ಮಾಡ್ತಿದೆ..ಭೀಮ್ಲಾ ನಾಯಕ್’ ಫೆಬ್ರವರಿ 25 ರಂದು ಬಿಡುಗಡೆಯಾಬೇಕಿತ್ತು.. ಆದ್ರೆ ಮೂಲಗಳ ಪ್ರಕಾರ ಸಿನಿಮಾವು ಮತ್ತೊಮ್ಮೆ ಪೋಸ್ಟ್ ಪೋನ್ ಆಗಲಿದೆ ಎನ್ನಲಾಗ್ತಿದೆ.. ಹಾಗಾದ್ರೆ ಹೊಸ ರಿಲೀಸ್ ದಿನಾಂಕ ಯಾವುದು..?? ಸಿನಿಮಾ ತಯಾರಕರು ಸಿನಿಮಾವನ್ನ ಏಪ್ರಿಲ್ 1 ರಂದು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ..
9 2020ರ ನವೆಂಬರ್ ನಲ್ಲಿ ಬಿಡುಗಡೆ ಆಗಿದ್ದ ತಮಿಳಿನ ಸೂರರೈ ಪೊಟ್ರು ಸಿನಿಮಾ ಈಗ ಹಿಂದಿಗೆ ರೀಮೇಕ್ ಆಗುತ್ತಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಈಗ ಹಿಂದಿಯಲ್ಲಿ ಅಕ್ಷಯ್ ಕುಮಾರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಅಂದ್ಹಾಗೆ ‘ಸೂರರೈ ಪೊಟ್ರು’ ಸಿನಿಮಾ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕಥೆ. ಸೂರ್ಯ, ಗೋಪಿನಾಥ್ ಪಾತ್ರದಲ್ಲಿ ನಟಿಸಿದ್ದರು. ಈಗ ಅಕ್ಷಯ್ ಕುಮಾರ್ ಗೋಪಿನಾಥ್ ಪಾತ್ರದಲ್ಲಿ ನಟಿಸಲಿದ್ದಾರೆ.
10 ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವಿರುದ್ಧ ಸೆಣಸಾಡಲು ನಾವು ಎದುರು ನೋಡುತ್ತಿದ್ದೀವಿ ಎಂದು ವಿಂಡೀಸ್ ತಂಡದ ನಾಯಕ ಪೋಲಾರ್ಡ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧ ನಮಗೆ ಅದ್ಭುತ ಜಯ ಸಿಕ್ಕಿದೆ. ಈಗ ನಾವು ಭಾರತ ಪ್ರವಾಸದ ಮೇಲೆ ದೃಷ್ಠಿ ನೆಟ್ಟಿದ್ದೇವೆ. ನಾವು ಈ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಖಂಡಿತವಾಗಿಯೂ ಸೋಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಭಾರತದ ಪ್ರವಾಸದ ಭಾಗವಾಗಿ ವೆಸ್ಟ್ ಇಂಡೀಸ್ ತಂಡ, ಮೂರು ಏಕದಿನ, ಮೂರು ಟಿ 20 ಪಂದ್ಯಗಳನ್ನಾಡಲಿದೆ.