ಬೆಂಗಳೂರು : ಶೀಘ್ರವಾಗಿ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. State Election Commission letter to the state government
ರಾಜ್ಯ ಚುನಾವಣೆ ಆಯೋಗ ( State Election Commission) ಪತ್ರದಲ್ಲಿ ” ರಾಜ್ಯದಲ್ಲಿ ಕೋವಿಡ್ 19 ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯತ್ ಗಳ ಚುನಾವಣೆಯನ್ನು ಮುಂದೂಡುವ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವಂತೆ ಕೋರಿರುವ ಪ್ರಸ್ತಾವನೆಯನ್ನು ಆಯೋಗವು ಪರಿಶೀಲಿಸಿದೆ. ಮುಂಜಾಗ್ರತಾ ಕ್ರಮದೊಂದಿಗೆ ಶೀಘ್ರದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು ನಡೆಸುವುದು ಸೂಕ್ತವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 8(2) ರಂತೆ ಆಡಳಿತಾಧಿಕಾರಿಗಳು ನೇಮಕಗೊಂಡ 6 ತಿಂಗಳ ಒಳಗಾಗಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆಯನ್ನು ನಡೆಸಬೇಕಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಚುನಾವಣಾ ಆಯೋಗವು ಎಸ್.ಒ.ಪಿ.ಯನ್ನು ಹೊರಡಿಸಿರುತ್ತದೆ.
ಗ್ರಾಮ ಪಂಚಾಯತ್ ಚುನಾವಣೆ ಪಕ್ಷರಹಿತ ಚುನಾವಣೆಯಾಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿ ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿ ಪ್ರಚಾರವು ಆಯಾ ಕ್ಷೇತ್ರಕ್ಕೆ ಸೀಮಿತವಾಗಿರುತ್ತಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳವ ದೃಷ್ಠಿಯಿಂದ ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಮಾತ್ರ ಚುನಾವಣಾ ಪ್ರಚಾರವನ್ನು ಮಾಡುವಂತೆ ಸೂಚನೆಯನ್ನು ನೀಡಲಾಗಿರುತ್ತದೆ. ಇದಲ್ಲದೆ, ಮತದಾರರ ಗುಂಪುಗೂಡುವಿಕೆಯನ್ನು ತೆಡೆಗಟ್ಟುವ ಹಾಗೂ ಕೋವಿಡ್ ಮುನ್ನೆಚ್ಚರಿಕೆಯನ್ನು ಪರಿಪಾಲಿಸಲು ಅನುವಾಗುವಂತೆ ಪ್ರತಿ ಮತಗಟ್ಟಗೆ 1,400 ಮತದಾರರ ಬದಲಿಗೆ ಗರಿಷ್ಠ 1000 ಮತದಾರರು ಇರುವಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ.
ಇದನ್ನೂ ಓದಿ :ಆರ್.ಆರ್ ನಗರಕ್ಕೆ ಮುನಿರತ್ನ, ಶಿರಾಗೆ ಡಾ.ರಾಜೇಶ್ ಗೌಡ ಬಿಜೆಪಿ ಟಿಕೆಟ್..!
ಸಾಮಾನ್ಯವಾಗಿ ಆಯೋಗವು ಜಿಲ್ಲಾವಾರು ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲಾಗುತ್ತಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತಾಲೂಕುಗಳನ್ನು ಪ್ರತ್ಯೇಕಿಸಿ ಎರಡು ಹಂತದಲ್ಲಿ ಚುನಾವಣೆಯನ್ನು ನಡೆಸಲು ಉದ್ದೇಶಿಸಿದೆ. ಜೊತೆಗೆ ಚುನಾವಣಾ ಸಿಬ್ಬಂದಿಯ ಚಲನವಲನಗಳನ್ನು ನಿಯಂತ್ರಿಸುವ ಉದ್ದೇಶದಿಂದ ಚುನಾವಣೆಗೆ ಆಯಾ ತಾಲೂಕಿನ ಸಿಬ್ಬಂದಿಯನ್ನು ಮತಗಟ್ಟೆ ಅಧಿಕಾರಿಗಳನ್ನಾಗಿ ನಿಯೋಜಿಸುವಂತೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳ ಅವಧಿಯು 2021ರ ಮೇ-ಜೂನ್ ನಲ್ಲಿಮುಕ್ತಾಯಗೊಳ್ಳಲಿದೆ. ಅವುಗಳಿಗೂ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗುತ್ತದೆ. 50 ಹೊಸ ತಾಲೂಕುಗಳ ರಚನೆ ಮಾಡಿರುವುದರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಕಾರ್ಯವನ್ನು 2020ರ ಡಿಸೆಂಬರ್ ನಿಂದ ಪ್ರಾರಂಭಿಸಬೇಕಾಗುತ್ತದೆ. ಜೊತೆಗೆ ಬಿಬಿಎಂಪಿಯ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ :ಆರ್.ಆರ್ ನಗರಕ್ಕೆ ಮುನಿರತ್ನ, ಶಿರಾಗೆ ಡಾ.ರಾಜೇಶ್ ಗೌಡ ಬಿಜೆಪಿ ಟಿಕೆಟ್..!
2021ರ ಮೇನಲ್ಲಿ 55 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಪೂರ್ಣಗೊಳ್ಳುತ್ತಿರುವುದರಿಂದ, ಇವುಗಳಿಗೂ ಸಹ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಆಯೋಗ ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗಿದೆ. 2021ನೇ ಸಾಲಿನಲ್ಲಿ ರಾಜ್ಯ ಚುನಾವಣಾ ಆಯೋಗ ಈ ಎಲ್ಲಾ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಬೇಕಿರುವುದರಿಂದ, 2020ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯನ್ನು ಮುಕ್ತಾಯಗೊಳಿಸುವುದು ಸೂಕ್ತವಾಗಿರುತ್ತದೆ ಎಂದು ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel