ರಾಜ್ಯದಲ್ಲಿ “ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಣೆ” Lockdown
ಬೆಂಗಳೂರು : ರಾಜ್ಯದಲ್ಲಿ ಜೂನ್ 15 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಲು ಮುಖ್ಯಮಂತ್ರಿಗಳಿಗೂ ಮನವಿ ಮಾಡುತ್ತೇನೆ.
ನಾಳೆ ಬೆಂಗಳೂರು ನಗರದ ಶಾಸಕರ ಸಭೆಯನ್ನೂ ಕರೆದಿದ್ದಾರೆ. ಅಲ್ಲಿಯೂ ಲಾಕ್ ಡೌನ್ ಮುಂದುವರೆಸಲು ಮನವಿ ಮಾಡುತ್ತೇನೆ.
ಬೆಂಗಳೂರಿನ ಕೆಲ ಸಚಿವರು ಹಂತ ಹಂತವಾಗಿ ಲಾಕ್ ಡೌನ್ ತೆರವು ಮಾಡುವ ಬಗ್ಗೆ ಹೇಳಿದ್ದಾರೆ.
ಆದರೆ 15ರವರೆಗೂ ಸಂಪೂರ್ಣ ಲಾಕ್ ಡೌನ್ ಇರಬೇಕು. ನಂತರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಇನ್ನು ಇಡೀ ರಾಜ್ಯದಲ್ಲಿ ಕೋವಿಡ್ ಪ್ರಕರಣ 500ಕ್ಕಿಂತ ಇಳಿಕೆಯಾದರೆ ಮಾತ್ರ ಲಾಕ್ ಡೌನ್ ತೆಗೆಯಬೇಕು. 3ನೇ ಅಲೆಯ ಬಗ್ಗೆಯೂ ತಜ್ಞರು ಹೇಳುತ್ತಿದ್ದಾರೆ.
ಅದಕ್ಕೂ ಸಿದ್ಧವಾಗಬೇಕಿದೆ. ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕಾಗಿರುವುದರಿಂದ ಲಾಕ್ ಡೌನ್ ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.