ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದು, ‘ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಇದಾಗಲಿದೆ’ ಎಂದು ತಿಳಿಸಿದ್ದಾರೆ.
ಇಂದು ಕೇಂದ್ರದ ಆರೋಗ್ಯ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ ಕಳಂಕ ಎಂದು ತಿಳಿದುಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್. ಅದರಿಂದ ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ. ಶೇ.97 ಕೊರೊನಾ ಸೋಂಕಿತರು ವಾಸಿಯಾಗಿದ್ದಾರೆ ಎಂದು ಸುಧಾಕರ್ ಹೇಳಿದರು.
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








