ಯುಎಇ ಅಧ್ಯಕ್ಷ ನಿಧನ ಹಿನ್ನೆಲೆ ರಾಜ್ಯಾದ್ಯಂತ 1 ದಿನ ಶೋಕಾಚರಣೆ…..
ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅವರು ನಿನ್ನೆ ನಿಧನರಾಗಿರುವ ಹಿನ್ನಲೆಯಲ್ಲಿ ಭಾರತದಲ್ಲೂ ಸಹ ದೇಶಾದ್ಯಂತ ಇಂದು ಶೋಕಾಚರಣೆ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಅಗಲಿದ ಗಣ್ಯರ ಗೌರವಾರ್ಥ ಇಂದು ಒಂದು ದಿನ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಶೇಖ್ ಖಲೀಫಾ ಬಿನ್ ಜಾಯೆದ್ ಅವರು 13-05-2022 ರಂದು ನಿಧನರಾಗಿರುವ ಹಿನ್ನಲೆಯಲ್ಲಿ ಅಗಲಿದ ಗಣ್ಯರ ಗೌರವಾರ್ಥ ದಿನಾಂಕ 14-05-2022 ರಂದು ಒಂದು ದಿನ ಶೋಕಾರಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಈ ಕಾರಣದಿಂದ ರಾಜ್ಯದಲ್ಲೂ 14-05-2022 ರಂದು ಒಂದು ದಿನದ ಮಟ್ಟಿಗೆ ಶೋಕಾಚರಣೆ ಆಚರಿಸಲಾಗುವುದು.
ಈ ದಿನದಂದು ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗು ನಿಯತವಾಗಿ ರಾಷ್ಟ್ರಧ್ವಜವನ್ನ ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನ ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಪರ ಕಾರ್ಯದರ್ಶಿ ವೀರಭದ್ರ ಹಂಚನಾಳ್ ಅವರು ಸುತ್ತೋಲೆ ಹೊರಡಿಸಿದ್ದಾರೆ.