Monkeypox ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರ
ಬೆಂಗಳೂರು : ಮಂಕಿಫಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರವಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮಂಕಿಫಾಕ್ಸ್ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಮಂಕಿಫಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರವಹಿಸಲಾಗಿದೆ.
ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮುನ್ನೇಚ್ಚರಿಕೆ ಮಾರ್ಗಸೂಚಿ ಹೊರಡಿಸಲಾಗಿತ್ತು.
ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇರಳದಲ್ಲಿ ಮೊನ್ನೆ ಒಂದು ಪ್ರಕರಣ ವರದಿಯಾಗಿದೆ.
ಆ ನಂತರ ಗಡಿ ಭಾಗದಲ್ಲಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
ಹೀಗಾಗಿ ಮಂಕಿಫಾಕ್ಸ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮೊಟ್ಟೆ ಅಪೌಷ್ಟಿಕ ಎಂಬ ಶಿಕ್ಷಣಕ್ಕೆ ವರದಿಯನ್ನು ಶಿಕ್ಷಣ ಇಲಾಖೆಗೆ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ವೈಯಕ್ತಿಕವಾಗಿ ತಿಳಿದುಕೊಂಡಿರುವಂತೆ ಹಾಲು, ಮೊಟ್ಟೆ ಎಲ್ಲವೂ ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಎಂದು ತಿಳಿದುಕೊಂಡಿದ್ದೇನೆ ಎಂದು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದರು.