ಅನಧಿಕೃತ ಪ್ರಾಣಿವಧೆಗೆ ಬ್ರೇಕ್ ಹಾಕುವ ಸಲುವಾಗಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಾತ್ರೆ, ಬಕ್ರೀದ್, ಹಬ್ಬ ಹರದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಕಟನೆಯೊಂದನ್ನು ಹೊರಡಿಸಿರುವ ಪಾಲಿಕೆ ಕೆಳಕಂಡ ಸ್ಥಳಗಳಲ್ಲಿ ಪ್ರಾಣಿವಧೆಗೆ ನಿರ್ಬಂಧ ಹೇರಿದೆ.
1. ರಸ್ತೆಗಳು , ಪಾದಚಾರಿ ಮಾರ್ಗಗಳು.
2. ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ಗಳ ಒಳ ಮತ್ತು ಹೊರ ಆವರಣಗಳು.
3. ಶಾಲೆ, ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ.
4. ದೇವಸ್ಥಾನಗಳ / ಮಸೀದಿಗಳ ಹಾಗೂ ಇತರೆ ಧಾರ್ಮಿಕ ಸ್ಥಳದ ಆವರಣಗಳಲ್ಲಿ.
5. ಉದ್ಯಾನವನಗಳ ಒಳಗೆ ಮತ್ತು ಹೊರಗೆ
6. ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ.
ಇನ್ನೂ 1976 ರ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಕಾಯ್ದೆ ಪ್ರಕಾರ ಪ್ರಾಣಿವಧೆ ಮಾಡುವುದರ ಬಗ್ಗೆ ಸ್ಪಷ್ಟಪಡಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಸಿದೆ. ಅಲ್ಲದೇ ಕರ್ನಾಟಕ ರಾಜ್ಯ ಪ್ರಾಣಿವಧಾ ನಿಯಂತ್ರಣ ನಿಯಮ 1959 ರ ಸೆಕ್ಷನ್ 3 ರ ಪ್ರಕಾರ ಹಾಗೂ ತಿದ್ದುಪಡಿ ಕಾಯ್ದೆ 1975 ರ ಪ್ರಕಾರ ಅನಧಿಕೃತ ಪ್ರಾಣಿವಧೆ ಶಿಕ್ಷಾರ್ಹ ಅಪರಾಧವಾಗಿದ್ದು , ಅಂಥಹವರಿಗೆ 6 ತಿಂಗಳ ಸಜೆ ಅಥವಾ ರೂ. 1000/-ಗಳ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ಉಲ್ಲೇಖವಾಗಿದೆ. ಜೊತೆಗೆ ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ, ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಕೋರಿದೆ. 
ಅಂದು ಕಾಡಿನ ಎಲೆಗಳೇ ಹಾಸಿಗೆ ಇಂದು ರೆಡ್ ಕಾರ್ಪೆಟ್:ರಾಷ್ಟ್ರೀಯ ನಾಯಕನ ಪಯಣದ ಹಿಂದೆ ಅಡಗಿದೆ ಇತಿಹಾಸದ ನೋವು
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೇಶದ ಪ್ರಬಲ ರಾಜಕೀಯ ನಾಯಕರಲ್ಲಿ ಒಬ್ಬರು. ಆದರೆ ಅವರು ಇಂದು ನಡೆದು ಬರುತ್ತಿರುವ ಈ ಯಶಸ್ಸಿನ...








