ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವಾಗಿ ಕಾಂಗ್ರೆಸ್ (Congress) ನಿಂದ ಪ್ರೇರಿತವಾಗಿ ಹೋರಾಟಗಳು ನಡೆಯುತ್ತಿವೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಡಿದ್ದು ಸುಳ್ಳಾಗಬಹುದು. ನೋಡಿದ್ದು ಸುಳ್ಳಾಗಬಹುದು. ನಿಧಾನವಾಗಿ ಯೋಚಿಸಿದಾಗ ಎಲ್ಲವೂ ತಿಳಿಯುತ್ತದೆ ಎಂಬುವುದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನಿಂದ ಪ್ರೇರೇಪಿತರಾಗಿ ಹೋರಾಟ ಮಾಡಬಾರದು ಎಂದು ಹೇಳಿದ್ದಾರೆ.
ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ. ನನಗೂ ಅದು ಗೊತ್ತಿದೆ. ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಜೀವಿತಾವಧಿಯಿಂದ ಇಲ್ಲಿಯವರೆಗೆ ಅವರ ವಿರುದ್ಧವಾಗಿ ನಡೆದುಕೊಂಡ ವಿಷಯವನ್ನು ಸಂಪೂರ್ಣವಾಗಿ ವಿವರಿಸಿದ್ದರಿಂದ ಕಾಂಗ್ರೆಸ್ಸಿಗೆ ಅದು ಮುಜುಗುರವಾಗಿ ಈ ರೀತಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...






