ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವಾಗಿ ಕಾಂಗ್ರೆಸ್ (Congress) ನಿಂದ ಪ್ರೇರಿತವಾಗಿ ಹೋರಾಟಗಳು ನಡೆಯುತ್ತಿವೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಡಿದ್ದು ಸುಳ್ಳಾಗಬಹುದು. ನೋಡಿದ್ದು ಸುಳ್ಳಾಗಬಹುದು. ನಿಧಾನವಾಗಿ ಯೋಚಿಸಿದಾಗ ಎಲ್ಲವೂ ತಿಳಿಯುತ್ತದೆ ಎಂಬುವುದನ್ನು ಹೋರಾಟಗಾರರು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನಿಂದ ಪ್ರೇರೇಪಿತರಾಗಿ ಹೋರಾಟ ಮಾಡಬಾರದು ಎಂದು ಹೇಳಿದ್ದಾರೆ.
ಅಮಿತ್ ಶಾ ಅವರ ಮಾತಿನಿಂದ ಕೆಲವರಿಗೆ ಅಪಮಾನವಾಗಿದೆ. ನನಗೂ ಅದು ಗೊತ್ತಿದೆ. ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಜೀವಿತಾವಧಿಯಿಂದ ಇಲ್ಲಿಯವರೆಗೆ ಅವರ ವಿರುದ್ಧವಾಗಿ ನಡೆದುಕೊಂಡ ವಿಷಯವನ್ನು ಸಂಪೂರ್ಣವಾಗಿ ವಿವರಿಸಿದ್ದರಿಂದ ಕಾಂಗ್ರೆಸ್ಸಿಗೆ ಅದು ಮುಜುಗುರವಾಗಿ ಈ ರೀತಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್
ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...








