ತುಮಕೂರು : ಈಜಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮೈದಾಳ ಕೆರೆಯಲ್ಲಿ ನಡೆದಿದೆ. ನಂದು (20) ಈಜಲು ತೆರಳಿ ಸಾವನ್ನಪ್ಪಿದ ಮೃತ ವಿದ್ಯಾರ್ಥಿ ಎನ್ನಲಾಗಿದೆ. ನಂದು ಸ್ನೇಹಿತರ ಜೊತೆ ಈಜಲು ತೆರಳಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿದವನು ಮೇಲೆ ಬಂದಿಲ್ಲ. ಈ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಮೃತ ದೇಹ ಹೊರ ತೆಗೆದಿದ್ದಾರೆ.