ಸ್ನೇಹಿತರ ಮಧ್ಯೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕೊಲೆ ಮಾಡಿದ ನಂತರ ಆರೋಪಿಗಳು ಶವವನ್ನು ಹೊಲದಲ್ಲಿಯೇ ಹೂತು ಹಾಕಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ನೋಯ್ಡಾ ಮೂಲದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಹಾಗೂ ಉದ್ಯಮಿಯ ಪುತ್ರ ಯಶ್ ಮಿತ್ತಲ್ ನಾಪತ್ತೆಯಾಗಿದ್ದ ವಿದ್ಯಾರ್ಥಿ. ನಾಪತ್ತೆಯಾದ ನಂತರ ಆತನ ತಂದೆಗೆ 6 ಕೋಟಿ ನೀಡುವಂತೆ ಮೆಸೇಜ್ ಬಂದಿತ್ತು.
ವಿದ್ಯಾರ್ಥಿಯ ಫೋನ್ ಕಾಲ್ ಲಿಸ್ಟ್ ಪರಿಶೀಲಿಸಿದಾಗ ರಚಿತ್ ಎಂಬುವವನ ನಂಬರ್ ಇತ್ತು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಯಶ್, ರಚಿತ್, ಶಿವಂ ಹಾಗೂ ಸುಶಾಂತ್ ಹಾಗೂ ಶಿವಮ್ ಅವರೊಂದಿಗೆ ಆಗಾಗ ಸುತ್ತಾಡುತ್ತಿದ್ದ ಎಂದು ತಿಳಿದು ಬಂದಿದೆ. ಅವರೆಲ್ಲ ಯಶ್ ನನ್ನು ಕರೆದುಕೊಂಡು ಪಾರ್ಟಿಗೆ ಹೋಗಿದ್ದಾರೆ. ಆದರೆ, ಅಲ್ಲಿ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಯಶ್ ನನ್ನು ಕೊಲೆ ಮಾಡಿ, ಶವ ಹೂತು ಹಾಕಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಮೂವರನ್ನು ಬಂಧಿಸಲಾಗಿದ್ದು, ಮತ್ತೋರ್ವನಿಗಾಗಿ ಬಲೆ ಬೀಸಲಾಗಿದೆ.