ಮಂಗಳೂರು: ಹಹಾಸ್ಟೆಲ್ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ (Food Poison) ಘಟನೆಯೊಂದು ನಡೆದಿದೆ.
ಈ ಘನೆಟ ಜಿಲ್ಲೆಯ ಹೊರವಲಯದ ವಲಚ್ಚಿಲ್ ಹತ್ತಿರದ ಶ್ರೀನಿವಾಸ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿಯೇ ನಡೆದಿದೆ. ಹಾಸ್ಟೆಲ್ ನಲ್ಲಿದ್ದ ನೂರಾರು ವಿದ್ಯಾರ್ಥಿಗಳು (Student) ರಾತ್ರಿ ಊಟ ಸೇವಿಸಿದ ನಂತರ ಹೊಟ್ಟೆ ನೋವಿನಿಂದ ಒದ್ದಾಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಮಂಗಳೂರು ಹಾಗೂ ತುಂಬೆಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಊಟದಲ್ಲಿ ಹುಳು ಬಿದ್ದ ಪರಿಣಾಮ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.