ಬಿಎಸ್ವೈ “ಚಮಚ” ಆಗಲಿಲ್ಲ ಎಂದು ಬದಲಾವಣೆ ಪ್ರಯತ್ನ : ಬಿಎಸ್ ವೈ ಪರ ಸುಬ್ರಮಣಿಯನ್ ಬ್ಯಾಟ್
ನವದೆಹಲಿ : ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪ “ಚಮಚ” ಆಗಲಿಲ್ಲ ಎಂಬ ಕಾರಣಕ್ಕೆ ಕೆಲವರು ಅವರನ್ನು ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯ್ ಸ್ವಾಮಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಕಾರಣ. ಕೆಲವರು ಪಕ್ಷದಲ್ಲಿ ಬಿಎಸ್ವೈ “ಚಮಚ” ಆಗಲಿಲ್ಲ ಎಂಬ ಕಾರಣಕ್ಕೆ ಅಧಿಕಾರದಿಂದ ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಇಲ್ಲದೆ ಮತ್ತೆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಕೇವಲ ಬಿಎಸ್ ವೈ ಅವರಿಂದ ಮಾತ್ರ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದು ಬಿ.ಎಸ್.ಯಡಿಯೂರಪ್ಪ ಪರ ಟ್ವೀಟ್ ಮಾಡಿದ್ದಾರೆ.
ಅಲ್ಲದೆ 2013ರಲ್ಲಿ ಯಡಿಯೂರಪ್ಪ ಇಲ್ಲದೇ ಬಿಜೆಪಿ ರಾಜ್ಯದಲ್ಲಿ ಬಹುಮತ ಗಳಿಸಲು ಸಾಧ್ಯವಾಗದೇ ಇರುವುದನ್ನು ಸೂಚಿಸಿ ಮತ್ತೆ ಅದೇ ತಪ್ಪನ್ನು ಪಕ್ಷ ಏಕೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.