ಸುಶಾಂತ್ ಸಾವಿನ ಪ್ರಕರಣ ಸಿಬಿಐಗೆ ಒಪ್ಪಿಸಬೇಕು: ಪ್ರಧಾನಿಗೆ ಸುಬ್ರಮಣಿಯನ್ ಪತ್ರ..!
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವನಪ್ಪಿ ಒಂದು ತಿಂಗಳೇ ಕಳೆದ್ರು ಅವರ ಸಾವಿನ ಬಗ್ಗೆ ಅನೇಕ ಅನುಮಾನಗಳು ವ್ಯಕ್ತವಾಗ್ತಿವೆ. ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಹ ಸುಶಾಂತ್ ಸಿಂಗ್ ಸಾವಿನ ಹಿಂದೆ ಗಣ್ಯರ ಕೈವಾಡವಿದೆ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ರು. ಇದೀಗ ಈ ಕುರಿತಾಗಿ ಪ್ರಧಾನಿ ಮೋದಿ ಅವರಿಗೆ ಪತ್ರ ಸಲ್ಲಿಸಿರುವ ಸುಬ್ರಮಣಿಯನ್ ಸುಸಾಂತ್ ರ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಸುಶಾಂತ್ ರ ಅಭಿಮಾನಿಗಳ ಹೋರಾಟಕ್ಕೆ ಸುಬ್ರಮಣಿಯನ್ ಸಾಥ್ ನೀಡಿದ್ದಾರೆ.
ಈ ಪ್ರಕರಣದಲ್ಲಿ ದೊಡ್ಡವರ ಕೈವಾಡವಿದೆ. ಈಗಾಗಲೇ ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದ್ರೆ ನನ್ನ ಮೂಲಗಳ ಪ್ರಕಾರ ಬಾಲಿವುಡ್ ನ ಕೆಲ ಗಣ್ಯರು ಈ ಕೇಸ್ ಅನ್ನು ಮುಚ್ಚಿಹಾಕುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಸುಸಾಂತ್ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನದಲ್ಲಿದ್ದಾರೆ. ಮುಂಬೈ ಪೊಲೀಸರು ಈ ಬಗ್ಗೆ ನಿಷ್ಪಕ್ಷªಪಾತವಾಗಿ ತನಿಖೆ ನಡೆಸಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಸುಬ್ರಮಣಿಯನ್ ತಿಳಿಸಿದ್ದಾರೆ.