ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮೂಗಿನಲ್ಲಿ ಏಕಾಏಕಿ ರಕ್ತಸ್ರಾವ ಉಂಟಾದ ಘಟನೆ ನಡೆದಿದೆ.
ಸಭೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೂಗಿನಿಂದ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಗೊಂಡ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ಯಲಾಗಿದೆ. ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್ (Private Hotel) ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾನಾಡುತ್ತಿದ್ದಾಗ ಮೂಗಿನಲ್ಲಿ ರಕ್ತಸ್ರಾವವಾಗಿದೆ.
ಕುಮಾರಸ್ವಾಮಿ ಖರ್ಚಿಫ್ ನಿಂದ ಎಷ್ಟೇ ಅದನ್ನು ಹಿಡಿಯಲು ಯತ್ನಿಸಿದರೂ ರಕ್ತಸ್ರಾವ ಹೆಚ್ಚಾಗಿದೆ. ಇದರಿಂದ ಆತಂಕಗೊಂಡ ಕಾರ್ಯಕರ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಮೂಗಿಗೆ ಕರ್ಚೀಫ್ ಹಿಡಿದುಕೊಂಡೇ ಕಾರಿನಲ್ಲಿ ಹೋಗಿದ್ದಾರೆ. ಅವರು ಕಾರಿನಲ್ಲಿ ಹೋಗುವಷ್ಟರಲ್ಲಿ ಬಟ್ಟೆಯೆಲ್ಲ ರಕ್ತದಿಂದ ತೊಯ್ದಿದೆ.








