ಬೆಂಗಳೂರು : ಸಚಿವ ಬಿ.ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್ ( Sudhakar ) ಅವರಿಗೆ ನೀಡಲಾಗಿದೆ. ಈ ಹಿನ್ನೆಲೆ ಸುಧಾಕರ್ ( Sudhakar ) ಅವರು ಇಂದು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಸಿಎಂ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ಅವರ ನಂಬಿಕೆಗೆ ಚ್ಯುತಿ ಬಾರದಂತೆ ಜನತೆಗೆ ಉತ್ತಮ ಆರೋಗ್ಯ ಕಲ್ಪಿಸಲು ಶಕ್ತಿ, ಯುಕ್ತಿ ಮೀರಿ ಕೆಲಸ ಮಾಡುತ್ತೇನೆ.
ಇದನ್ನೂ ಓದಿ : `ಕೈ’ ಬಿಟ್ಟ ನಟಿ ಖುಷ್ಬೂ : ನಾಳೆ `ಕಮಲ’ ಹಿಡಿಯುವ ಸಾಧ್ಯತೆ
ಬಿ.ಎಸ್. ಯಡಿಯೂರಪ್ಪ ಅವರು ರವಿವಾರ ಸಂಜೆ ವೈದ್ಯಕೀಯ ಶಿಕ್ಷಣ ಖಾತೆ ಜತೆಗೆ ಆರೋಗ್ಯ ಖಾತೆಯನ್ನೂ ವಹಿಸಿಕೊಂಡು ಸರಿಯಾಗಿ ಕೋವಿಡ್-19 ನಿಯಂತ್ರಿಸಿ ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಭಾಗ್ಯ ಸಿಗುವಂತೆ ಕ್ರಾಂತಿಕಾರಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ಡಾ.ಕೆ. ಸುಧಾಕರ್ ತಿಳಿಸಿದರು.
ಇನ್ನು ಈ ದಿಢೀರ್ ಬೆಳವಣಿಗೆಯ ಪರಿಣಾಮ ಆರೋಗ್ಯ ಸಚಿವ ಶ್ರೀರಾಮುಲು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ತನ್ನ ಖಾತೆ ಬದಲಾವಣೆ ಸಂಬಂಧ ಶ್ರೀರಾಮುಲು ಅವರು ನಿನ್ನೆ ರಾತ್ರಿಯೇ ಮುಖ್ಯಮಂತ್ರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ : `ಕೈ’ ಕಲಿಗಳಿಗೆ ಬಿ ಫಾರಂ ಹಂಚಿಕೆ; ಕಮಲ, ತೆನೆ ಅಭ್ಯರ್ಥಿ ಫೈನಲ್ ಯಾವಾಗ..?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel