ಖಿನ್ನತೆಯಿಂದಾಗಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ (Medical Student) ತನ್ನ ಖಾಸಗಿ ಅಂಗವನ್ನೇ (Private Part) ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್ ನಲ್ಲಿ ನಡೆದಿದೆ.
ವೈದ್ಯಕೀಯ ವಿದ್ಯಾರ್ಥಿಯನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದೆ. ಈ ಯುವಕ ಕಳೆದ 4 ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಭಾನುವಾರ ಲೇಸರ್ ಬ್ಲೇಡ್ ಬಳಸಿ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ದೀಕ್ಷಿತ್ ರೆಡ್ಡಿ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಕಳೆದ ಎರಡ್ಮೂರು ತಿಂಗಳುಗಳಿಂದ ಔಷಧಿ ಸೇವಿಸುವುದನ್ನು ನಿಲ್ಲಿಸಿದ್ದ. ಆತ್ಮಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ