ರಾಯಚೂರು: ಪಾಲಕರು ಮದ್ಯಪಾನ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಆದರ್ಶ(24) ಆತ್ಮಹತ್ಯೆ ಮಡಿಕೊಂಡಿರುವ ಯುವಕ. ಈತ ಪ್ರತಿ ದಿನವೂ ಮದ್ಯಪಾನ ಮಾಡುತ್ತಿದ್ದ. ಹೀಗಾಗಿ ಪೋಷಕರು ಮದ್ಯ ಸೇವಿಸಬೇಡ ಎಂದು ಬುದ್ಧಿ ಹೇಳಿದ್ದಾರೆ. ಅಲ್ಲದೇ, ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಹೀಗಾಗಿ ಬೇಸರಗೊಂಡು ಮನೆಯಲ್ಲಿ ಬುದ್ಧಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.