ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ – ವರ್ಷಕ್ಕೆ ಕೇವಲ 250 ರೂಪಾಯಿ ಹೂಡಿಕೆ ಮಾಡಿ ಮಗಳ ಭವಿಷ್ಯ ರೂಪಿಸಿ

Shwetha by Shwetha
December 23, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Sukanya Samriddhi Yojana savings
Share on FacebookShare on TwitterShare on WhatsappShare on Telegram

ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ – ವರ್ಷಕ್ಕೆ ಕೇವಲ 250 ರೂಪಾಯಿ ಹೂಡಿಕೆ ಮಾಡಿ ಮಗಳ ಭವಿಷ್ಯ ರೂಪಿಸಿ Sukanya Samriddhi Yojana savings

ಹೊಸದಿಲ್ಲಿ, ಡಿಸೆಂಬರ್23: ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆಯು ಸರ್ಕಾರದಿಂದ ನಡೆಸಲ್ಪಡುವ ಸಣ್ಣ ಉಳಿತಾಯ ಯೋಜನೆಯಾಗಿದ್ದು, ಇದನ್ನು ದೇಶಾದ್ಯಂತ ಗೊತ್ತುಪಡಿಸಿದ ಅಂಚೆ ಕಚೇರಿಗಳು ಅಥವಾ ಬ್ಯಾಂಕುಗಳಲ್ಲಿ ತೆರೆಯಬಹುದಾಗಿದೆ. Sukanya Samriddhi Yojana savings

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

Sukanya Samriddhi Yojana savings

ಈ ಯೋಜನೆಯು ಹೆಣ್ಣು ಮಕ್ಕಳಿಗಾಗಿದ್ದು ಅಕ್ಟೋಬರ್-ಡಿಸೆಂಬರ್ 2020 ರ ಅವಧಿಯಲ್ಲಿ ಶೇಕಡಾ 7.6 ರಷ್ಟು ಬಡ್ಡಿದರವನ್ನು ನೀಡುತ್ತದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿನ ಪೋಷಕರು ತೆರೆಯಬಹುದು ಮತ್ತು ಗರಿಷ್ಠ 21 ವರ್ಷ ಅಥವಾ ಹೆಣ್ಣು ಮಗು 18 ವರ್ಷ ತುಂಬುವವರೆಗೆ ಹೊಂದಬಹುದು. ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ಕನಿಷ್ಠ 250 ರೂ ಯಿಂದ ಗರಿಷ್ಠ 1.50 ಲಕ್ಷ ರೂ ಮೂಲಕ ಖಾತೆ ತೆರೆಯಬಹುದಾಗಿದೆ.

ದಿನಕ್ಕೆ 10 ರೂಪಾಯಿಗಳನ್ನ ಮಾತ್ರ ಹೂಡಿಕೆ ಮಾಡುವ ಮೂಲಕ ಈ ಯೋಜನೆಯಲ್ಲಿ ದೊಡ್ಡ ಹೂಡಿಕೆಯನ್ನು ಪಡೆಯಬಹುದಾಗಿದೆ.

ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಅವರ ಪೋಷಣೆ, ವಿವಾಹಕ್ಕಾಗಿ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶದಿಂದ ಈ ವಿಶೇಷ ಯೋಜನೆಯನ್ನು ಸರ್ಕಾರವು ಆರಂಭಿಸಿದೆ.

ಜನವರಿ 1 2021 ರಿಂದ ಬದಲಾಗಲಿರುವ ಮತ್ತು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿರುವ ನಿಯಮಗಳ ಮಾಹಿತಿ ಇಲ್ಲಿದೆ

ಸುಕನ್ಯಾ ಸಮೃದ್ಧಿ ಯೋಜನೆಯಡಿ 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದಾಗಿದೆ. ಇದಕ್ಕಾಗಿ ಜನನ ಪ್ರಮಾಣ ಪತ್ರವನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ನೀಡಬೇಕು. ಇದರ ಜೊತೆಗೆ ಪಾಲಕರು ತಮ್ಮ ಭಾವಚಿತ್ರ, ವಿಳಾಸ ಹಾಗೂ ಗುರುತಿನ ಪತ್ರವನ್ನು ಸಹ ಸಲ್ಲಿಸಬೇಕು. ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಆದಾಯದೊಂದಿಗೆ ತೆರಿಗೆ ಉಳಿತಾಯದ ಲಾಭವನ್ನು ಕೂಡ ಪಡೆಯಬಹುದಾಗಿದೆ.

ದೇಶದ ಯಾವುದೇ ಅಂಚೆ ಕಚೇರಿ ಮತ್ತು ಬ್ಯಾಂಕ್ ನಲ್ಲಿ ಕೇವಲ 250 ರೂಪಾಯಿಗಳೊಂದಿಗೆ ಸುಕನ್ಯಾ ಖಾತೆ ತೆರೆಯಬಹುದಾಗಿದೆ.‌ ಒಂದು ಹೆಣ್ಣು ಮಗುವಿನ ಹೆಸರಿನಲ್ಲಿ ಒಂದು ಖಾತೆಯನ್ನು ಮಾತ್ರ ತೆರೆಯಬಹುದಾಗಿದೆ. ತಂದೆ-ತಾಯಿ ಇಬ್ಬರು ಹೆಣ್ಣುಮಕ್ಕಳ ಹೆಸರಿನಲ್ಲಿ ಮಾತ್ರ ಖಾತೆ ತೆರೆಯಬಹುದಾಗಿದ್ದು, ಅವಳಿ ಮಕ್ಕಳು ಅಥವಾ ಮೂವರು ಹೆಣ್ಣು ಮಕ್ಕಳು ಒಟ್ಟಿಗೆ ಇದ್ದರೆ, ಮೂರನೇ ಮಗುವಿಗೂ ಇದರ ಲಾಭ ಸಿಗುತ್ತದೆ.

ಮಗುವಿಗೆ 10 ವರ್ಷ ತುಂಬುವ ವರೆಗೆ ಈ ಖಾತೆಯನ್ನು ತೆರೆಯಬಹುದಾಗಿದೆ. ಆರಂಭಿಕ 14 ವರ್ಷಗಳ ಕಾಲ ಮೊತ್ತವನ್ನು ಖಾತೆಯಲ್ಲಿ ಜಮಾ ಮಾಡಬೇಕು ಮತ್ತು 21 ವರ್ಷಗಳ ನಂತರ ಹಣವನ್ನು ಹಿಂತೆಗೆದುಕೊಳ್ಳಬಹುದು. ಆದರೆ, ಮಗಳು 18 ವರ್ಷವಾದ ಬಳಿಕ ಮದುವೆ ಮಾಡಿದರೆ, ಆ ಹಣವನ್ನು ಹಿಂಪಡೆಯಬಹುದಾಗಿದೆ ಮತ್ತು ಮಗಳ ವಿದ್ಯಾಭ್ಯಾಸಕ್ಕಾಗಿ ಕೂಡ 50 ಪ್ರತಿಶತದಷ್ಟು ಹಣವನ್ನ ಹಿಂಪಡೆಯಬಹುದಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಸಿ ಅಡಿಯಲ್ಲಿ ತೆರಿಗೆ ವಿನಾಯಿತಿ ಪಡೆಯಬಹುದು. ಇತರ ಯೋಜನೆಗಳಿಗೆ ಹೋಲಿಸಿದರೆ ಇದರಲ್ಲಿ ಹೆಚ್ಚು ಬಡ್ಡಿಯನ್ನು ಪಡೆಯಬಹುದಾಗಿದೆ.

Sukanya Samriddhi Yojana savings

ನಿಬಂಧನೆಗಳು ಮತ್ತು ಷರತ್ತುಗಳು:
* ಖಾತೆ ತೆರೆದ ದಿನದಿಂದ 21 ವರ್ಷ ತುಂಬಿದ ಬಳಿಕ ಖಾತೆಯು ಮೆಚ್ಯೂರು ಆಗುತ್ತದೆ . ಆದರೆ, 21 ವರ್ಷ ಪೂರ್ಣಗೊಳ್ಳುವ ಮೊದಲು ಹೆಣ್ಣು ಮಗುವಿನ ಮದುವೆಯಾದರೆ ಖಾತೆಯನ್ನು ಮುಚ್ಚಬೇಕು ಎಂಬ ಷರತ್ತು ಇದೆ. ಆ ಬಳಿಕ ಯಾವುದೇ ಹೆಚ್ಚಿನ ಕಾರ್ಯಾಚರಣೆಯನ್ನು ಅನುಮತಿಸುವುದಿಲ್ಲ.

* ಈ ಮೊದಲು ಇಬ್ಬರು ಹೆಣ್ಣು ಮಕ್ಕಳು ಮಾತ್ರ ಖಾತೆ ತೆರೆಯಬಹುದು ಎಂಬ ನಿಯಮವಿತ್ತು. ಆದರೆ, ಈಗ ಮೂರು ಖಾತೆಗಳನ್ನು ತೆರೆಯಬಹುದಾಗಿದೆ. ಜನನ ಪ್ರಮಾಣ ಪತ್ರದಿಂದ ಅಫಿಡವಿಟ್ ಸಲ್ಲಿಸಬೇಕು.

* ಎರಡನೇ ಜನನ ಸಮಯದಲ್ಲಿ ಅವಳಿ ಹೆಣ್ಣು ಮಕ್ಕಳು ಜನಿಸಿದರೆ ಅಥವಾ ಮೊದಲ ಜನನದಲ್ಲಿ ಮೂರು ಹೆಣ್ಣು ಮಕ್ಕಳು ಜನಿಸಿದ್ದರೆ ಮಾತ್ರ ಮೂರು ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ.

* ಪ್ರತಿ ವರ್ಷ ಖಾತೆಯಲ್ಲಿ 250 ರೂಪಾಯಿಯನ್ನು ಜಮಾ ಮಾಡದಿದ್ದಲ್ಲಿ, ಅದನ್ನು ಪೂರ್ವನಿಯೋಜಿತ ಖಾತೆ ಎಂದು ಪರಿಗಣಿಸಲಾಗುತ್ತದೆ. ಆದರೆ ಆ ಖಾತೆಯ ಬಡ್ಡಿ ದರವನ್ನು ಈಗಿರುವ ಠೇವಣಿ ಮೊತ್ತದ ಮೇಲೆ ಸೇರಿಸುವುದನ್ನು ಮುಂದುವರಿಸಲಾಗುತ್ತದೆ.

* ಮಗಳು 18 ವರ್ಷವಾಗುವವರೆಗೆ (ಹಿಂದಿನ ವಯಸ್ಸಿನ ಮಿತಿ 10 ವರ್ಷ) ಎಸ್ ಎಸ್ ವೈ ಖಾತೆಯನ್ನ ನಡೆಸಲು ಅವಕಾಶವಿಲ್ಲ.

* ಸರ್ಕಾರದಿಂದ 100 ಪ್ರತಿಶತ ಭದ್ರತಾ ಗ್ಯಾರಂಟಿ ಇದೆ.

* ಮೆಚ್ಯೂರಿಟಿ ಬಳಿಕವೂ, ಅದೇ ಬಡ್ಡಿ ಮೊತ್ತವನ್ನು ಖಾತೆ ಮುಚ್ಚುವವರೆಗೆ ಠೇವಣಿಯ ಮೇಲೆ ಪಾವತಿಸಲಾಗುತ್ತದೆ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1341404758230351873?s=19

https://twitter.com/SaakshaTv/status/1341406814479507461?s=19

 

Tags: Savings schemeSukanya Samriddhi Yojana savings
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram