ಪೇಟೆರೌಡಿ.. ಜಲೀಲ.. ಸುಮಲತಾ – ಪ್ರತಾಪ್ ಸಿಂಹ ಮಧ್ಯೆ ವಾಗ್ಯುದ್ಧ
ಮೈಸೂರು : ಮಂಡ್ಯ ಸಂಸದೆ ಸುಮಲತಾ ಹಾಗೂ ಸಂಸದ ಪ್ರತಾಪ್ ಸಿಂಹ ನಡುವೆ ವಾಗ್ಯುದ್ಧ ಮುಂದುವರಿದಿದೆ.
ತಮ್ಮನ್ನು ಪೇಟೆರೌಡಿಗೆ ಹೋಲಿಸಿ ಮಾತನಾಡಿದ್ದ ಸುಮಲತಾ ಅವರ ವಿರುದ್ಧ ಇಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
” ಸಂಸದೆ ಸುಮಲತಾ ಅವರ ಹೇಳಿಕೆಯನ್ನು ಸೀರಿಯಸ್ ಆಗಿ ತಗೋಬೇಡಿ. ಸುಮಲತಾ ಅವರು ಸಿನಿಮಾ ಜಗತ್ತಿನಿಂದ ಬಂದವರು,
ಬಣ್ಣದ ಲೋಕದಿಂದ ಬಂದವರು. ಮಾಧ್ಯಮದವರ ಪ್ರಶ್ನೆಗೆ ನಾಗರಹಾವು ಸಿನಿಮಾ ಜಲೀಲ ನೆನಪಾಗಿ ಡೈಲಾಗ್ ಹೊಡೆದಿರ್ತಾರೆ.
ನೀವು ಅದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ” ಎಂದು ಪ್ರತಾಪ್ ಸಿಂಹ ಸುಮಲತಾ ಅವರಿಗೆ ಟಾಂಗ್ ನೀಡಿದ್ದಾರೆ.
ಸಂಪತ್ ರಾಜ್ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ : ಸಿದ್ದರಾಮಯ್ಯ
ಇನ್ನು ಸುಮಲತಾ ಅವರ ” ಅಂಬರೀಷ್ ಇದ್ದಾಗ ಯಾರು ಮಾತನಾಡುತ್ತಿರಲಿಲ್ಲ, ಈಗ ಅಂಬಿರೀಷ್ ಇಲ್ಲ ಎಂದು ಹೀಗೆ ಮಾತನಾಡುತ್ತಿದ್ದಾರೆ ಎಂಬ ಹೇಳಿಕೆ ಖಾರವಾಗಿ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಪಾಳೇಗಾರಿಕೆ ಮನಸ್ಥಿತಿ ಪ್ರಜಾಪ್ರಭುತ್ವದಲ್ಲಿ ನಡೆಯೋದಿಲ್ಲ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಯಾರು ಏನು ಬೇಕಾದರೂ ಆಗಬಹುದು. ನಾನು, ನನ್ನ ಕುಟುಂಬ ಅನ್ನುವ ಪಾಳೇಗಾರಿಕೆ ನಡೆಯೋದಿಲ್ಲ.
ನಾನು ಯಾವ ಸ್ಟಾರ್ ಅಲ್ಲ. ನನಗೆ ಯಾವ ಅಭಿಮಾನಿಯೂ ಬಂದು ಓಟು ಹಾಕೋಲ್ಲ. ನನಗೆ ನನ್ನ ಕೆಲಸವೇ ಕಾಯೋದು. ಹಾಗಾಗಿ ನನಗೆ ಕೆಲಸದ ಮೇಲೆ ನಂಬಿಕೆಯಿದೆ ಎಂದು ಹೇಳಿದ್ರು.
ಕೆಲ ದಿನಗಳಿಂದ ಹಿಂದೆ ಪ್ರತಾಪ್ ಸಿಂಹ ಮಂಡ್ಯ ಜಿಲ್ಲೆಯ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಅವರನ್ನು ಟೀಕಿಸಿದ್ದರು.
ಕೃಷಿ ತಜ್ಞರೇ ಕೃಷಿ ರೈತರ ಕೃಷಿಗೆ ವೈದ್ಯರಾಗಬೇಕು : ಬಿ.ಸಿ.ಪಾಟೀಲ್
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ನಿನ್ನೆ ಮಾತನಾಡಿದ ಸುಮಲತಾ, ಪ್ರತಾಪ್ ಸಿಂಹ ಅವರು ನಮ್ಮ ಕ್ಷೇತ್ರದ ಪಕ್ಕದ ಕ್ಷೇತ್ರದ ಸಂಸದರು.
ಅವರು ಎರಡು ಬಾರಿ ಸಂಸದರಾಗಿದ್ದಾರೆ. ಅದನ್ನು ಅರಿತು ಮಾತನಾಡಬೇಕಾಗುತ್ತದೆ. ಪೇಟೆ ರೌಡಿಯ ತರಹ ಅವರು ಮಾತನಾಡಬಾರದು” ಎಂದು ಹೇಳಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel