“ಕೊರೊನಾ ಇಲ್ಲ ಅಂತ ಹೇಳುವವರಿಗೆ ಕಪಾಳಕ್ಕೆ ಹೊಡೆಯಿರಿ” : ನಟಿ ಸುನೇತ್ರಾ ಕಣ್ಣೀರು
ಬೆಂಗಳೂರು : ಕೊರೊನಾ ಇಲ್ಲ ಅಂತ ಹೇಳೋರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ನಟಿ ಸುನೇತ್ರಾ ಪಂಡಿತ್ ಹೇಳಿಕೆ ನೀಡಿದ್ದಾರೆ. ಸುನೇತ್ರಾ ಅವರ ಅಕ್ಕ ಕೊರೊನಾದಿಂದ ಮೃತಪಟ್ಟಿದ್ದು, ಸುಮ್ಮನಹಳ್ಳಿ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮ್ಮಕ್ಕ ಕೋವಿಡ್ ನಿಂದ ಸತ್ತೋದ್ಳು. ನಮ್ಮ ಅಕ್ಕ ಹೊರಟೋದ್ಳು. ಅವಳಿಗೆ ಮಕ್ಕಳಿದ್ದಾರೆ, ಆ ಮಕ್ಕಳು ಏನ್ ಮಾಡ್ಬೇಕು.
ಈ ರೀತಿಯ ಪರಿಸ್ಥಿತಿ ಯಾರಿಗೂ ಬರಬಾರದು. ಕೊರೊನಾ ಇಲ್ಲ ಅಂತ ಹೇಳೋರಿಗೆ ಕಪಾಳಕ್ಕೆ ಹೊಡೆಯಿರಿ. ಯಾರು ಯಾರಿಗೆ ಕೊರೊನಾ ಅನುಭವ ಆಗಿದೆಯೋ ಅವರಿಗೆ ಗೊತ್ತು ಅದರ ಕಷ್ಟ ಎಂದು ಕಣ್ಣೀರು ಹಾಕಿದರು. ಇದೇ ವೇಳೆ ದಯವಿಟ್ಟು ಬಿಬಿಎಂಪಿ ಒಂದು ಬೆಡ್ ಅಲರ್ಟ್ ಮಾಡುವಾಗ ಐಸಿಯು ಇರೋ ಆಸ್ಪತ್ರೆಗೆ ಅಲರ್ಟ್ ಮಾಡಿ ಎಂದು ಮನವಿ ಮಾಡಿಕೊಂಡರು.