ಮೇಕೆದಾಟು ಪಾದಯಾತ್ರೆಗೆ ಮಂಡ್ಯದಲ್ಲಿ ಬೆಂಬಲ
ಮಂಡ್ಯ : ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ಈ ಮಧ್ಯೆ ಕಾಂಗ್ರೆಸ್ ನ ಈ ಪಾದಯಾತ್ರೆಗೆ ಸಕ್ಕರೆ ನಾಡು ಮಂಡ್ಯದಲ್ಲೂ ಬೆಂಬಲ ಸಿಕ್ಕಿದೆ. ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಲು ಮಂಡ್ಯದಲ್ಲಿ ಸಿದ್ಧತೆ ನಡೆಯುತ್ತಿದೆ.
ಜನವರಿ 13 ರಂದು ಮಂಡ್ಯದಿಂದ 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.