ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು ಹಕ್ಕಲ್ಲ – ಸುಪ್ರೀಂ ಕೋರ್ಟ್
ಸಹಾನುಭೂತಿ ಅಥವ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಎಲ್ಲಾ ಸರ್ಕಾರಿ ಹುದ್ದೆಗಳಿಗೆ, ಸಹಾನುಭೂತಿಯ ಆಧಾರದ ಮೇಲೆ ನೇಮಕಾತಿಯ ಆವಕಾಶವಿದೆಯೋ ಹೊರತು ಅದು ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಂವಿಧಾನದ ಪರಿಚ್ಛೇದ 14 ಮತ್ತು 16 ರ ಅಡಿಯಲ್ಲಿ ಎಲ್ಲಾ ಸರ್ಕಾರಿ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಸಮಾನ ಅವಕಾಶವನ್ನು ನೀಡಬೇಕು ಎಂದು ನ್ಯಾಯಾಲಯ ಹೇಳಿದೆ.
ಅನುಕಂಪದ ಆಧಾರದ ಮೇಲೆ ಉದ್ಯೋಗಗಳನ್ನು ನೀಡುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಾಲಯವು ಎಲ್ಲಾ ಅಭ್ಯರ್ಥಿಗಳಿಗೆ ಸಮಾನ ಅವಕಾಶವನ್ನು ನೀಡಬೇಕುಮೃತ ಉದ್ಯೋಗಿಯ ಅವಲಂಬಿತರಿಗೆ ಸಹಾನುಭೂತಿಯ ನೇಮಕಾತಿಯ ಪ್ರಸ್ತಾಪ ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ, ಸಹಾನುಭೂತಿಯ ಆಧಾರವು ರಿಯಾಯಿತಿಯೇ ಹೊರತು ಹಕ್ಕಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಯುಪಿ ಸರ್ಕಾರದ ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯವು ಹೈಕೋರ್ಟ್ ನ ಆದೇಶವನ್ನು ಪುನಃಸ್ಥಾಪಿಸಿದೆ.