ಮಹದಾಯಿ ಕಾಮಗಾರಿ ಆರಂಭಕ್ಕೆ ಅಡ್ಡಿಪಡಿಸಿ, ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಮಹದಾಯಿ ಕಾಮಗಾರಿಗೆ ಇದ್ದ ಅಡ್ಡಿ ಕ್ಲಿಯರ್ ಆಗಿದೆ. ಕರ್ನಾಟಕಕ್ಕೆ ಮತ್ತೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ. ಈ ಸಂಬಂಧ ಎಜಿ ಪ್ರಭುಲಿಂಗ ಮಾಹಿತಿ ನೀಡಿದ್ದು, ಮಹದಾಯಿ ನದಿ ನೀರು ಹಂಚಿಕೆ ಕಾಮಗಾರಿ ಬಗ್ಗೆ ಸುಪ್ರೀಂ ಕೋರ್ಟ್ ನ ದ್ವಿ ಸದಸ್ಯ ಪೀಠ ಕರ್ನಾಟಕದ ಕಾನೂನು ಹೋರಾಟಕ್ಕೆ ಜಯ ನೀಡಿದೆ. ಟ್ರಿಬ್ಯೂನಲ್ ಆದೇಶದ ಅನ್ವಯದಂತೆ ಕಾಮಗಾರಿ ಆರಂಭವಾಗಲಿದೆ. ಈ ಮೂಲಕ ಕಾಮಗಾರಿಗೆ ಇದ್ದ ಅಡ್ಡಿ ಕ್ಲಿಯರ್ ಆಗಿದ್ದು, ಸದ್ಯದಲ್ಲಿಯೇ ಮಹದಾಯಿ ಯೋಜನೆ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದ್ರು. ಸದ್ಯ ಮಹದಾಯಿ ಕಾಮಗಾರಿ ಯೋಜನೆಗಿದ್ದ ಎಲ್ಲಾ ಅಡೆತಡೆಗಳು ಕೊನೆಗೊಂಡಿದೆ. ಇನ್ನು ಮುಂದೆ ಉತ್ತರ ಕರ್ನಾಟಕದ ಅನ್ನದಾತರು ನೆಮ್ಮದಿಯ ಜೀವನ ನಡೆಯಬಹುದಾಗಿದೆ.
ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...








