ಮಹದಾಯಿ ಕಾಮಗಾರಿ ಆರಂಭಕ್ಕೆ ಅಡ್ಡಿಪಡಿಸಿ, ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಮಹದಾಯಿ ಕಾಮಗಾರಿಗೆ ಇದ್ದ ಅಡ್ಡಿ ಕ್ಲಿಯರ್ ಆಗಿದೆ. ಕರ್ನಾಟಕಕ್ಕೆ ಮತ್ತೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ. ಈ ಸಂಬಂಧ ಎಜಿ ಪ್ರಭುಲಿಂಗ ಮಾಹಿತಿ ನೀಡಿದ್ದು, ಮಹದಾಯಿ ನದಿ ನೀರು ಹಂಚಿಕೆ ಕಾಮಗಾರಿ ಬಗ್ಗೆ ಸುಪ್ರೀಂ ಕೋರ್ಟ್ ನ ದ್ವಿ ಸದಸ್ಯ ಪೀಠ ಕರ್ನಾಟಕದ ಕಾನೂನು ಹೋರಾಟಕ್ಕೆ ಜಯ ನೀಡಿದೆ. ಟ್ರಿಬ್ಯೂನಲ್ ಆದೇಶದ ಅನ್ವಯದಂತೆ ಕಾಮಗಾರಿ ಆರಂಭವಾಗಲಿದೆ. ಈ ಮೂಲಕ ಕಾಮಗಾರಿಗೆ ಇದ್ದ ಅಡ್ಡಿ ಕ್ಲಿಯರ್ ಆಗಿದ್ದು, ಸದ್ಯದಲ್ಲಿಯೇ ಮಹದಾಯಿ ಯೋಜನೆ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದ್ರು. ಸದ್ಯ ಮಹದಾಯಿ ಕಾಮಗಾರಿ ಯೋಜನೆಗಿದ್ದ ಎಲ್ಲಾ ಅಡೆತಡೆಗಳು ಕೊನೆಗೊಂಡಿದೆ. ಇನ್ನು ಮುಂದೆ ಉತ್ತರ ಕರ್ನಾಟಕದ ಅನ್ನದಾತರು ನೆಮ್ಮದಿಯ ಜೀವನ ನಡೆಯಬಹುದಾಗಿದೆ.
ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!
ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...








