ಹೊಸದಿಲ್ಲಿ, ಮೇ 15 : ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತು ನ್ಯಾಯಮೂರ್ತಿಗಳಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶೀಘ್ರವೇ ವಸ್ತ್ರ ಸಂಹಿತೆ ನೀತಿ ರೂಪಿಸುವುದು ಎಂದು ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಮಲ್ಹೋತ್ರಾ, ಹೃಷಿಕೇಶ್ ರಾಯ್ ನೇತೃತ್ವದ ಪೀಠದ ಮುಂದೆ ‘ ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ವೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ‘ಗೌನ್ ನಿಂದ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಮೇ 17 ರ ಬಳಿಕ ನ್ಯಾಯಾಲಯದ ಕಾರ್ಯ ಚಟುವಟಿಕೆಗಳು ಶುರುವಾಗಲಿದ್ದು, ಸುಪ್ರೀಂ ಕೋರ್ಟ್ ತನ್ನ ಏಳು ವಾರಗಳ ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...








