ರಾಜಸ್ಥಾನದಲ್ಲಿ ರಾಜಕೀಯ ಬೆಳವಣಿಗೆಗಳು ತಾರಕಕ್ಕೇರಿದ ಬೆನ್ನಲ್ಲೇ ಸಿಎಂ ಅಶೋಕ್ ಗೆಹ್ಲೋಟ್ ರ ಸಹೋದರನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ರೇಡ್ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಕೇಂದ್ರ ಸರ್ಕಾರ ದೇಶದಲ್ಲಿ ರೇಡ್ ರಾಜ್’ ನಿರ್ಮಿಸಿದೆ. ಇಂಥಹ ಬೆದರಿಕೆಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ಸುರ್ಜೇವಾಲಾ ಉತ್ತರಪ್ರದೇಶದಲ್ಲಿ ಗುಂಡಾರಾಜ್, ಜಂಗಲ್ ರಾಜ್ಇದೆ. ಮೋದಿ ಅವರು ಭಾರತದಲ್ಲಿ ರೇಡ್ ರಾಜ್ ನಿರ್ಮಿಸುತ್ತಿದ್ದಾರೆ. ಕಾಂಗ್ರೆಸ್ ಇದಕ್ಕೆ ಹೆದರುವುದಿಲ್ಲ. ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತಂತ್ರವೂ ಸಕ್ಸಸ್ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ
ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...








