ರಾಜಸ್ಥಾನದಲ್ಲಿ ರಾಜಕೀಯ ಬೆಳವಣಿಗೆಗಳು ತಾರಕಕ್ಕೇರಿದ ಬೆನ್ನಲ್ಲೇ ಸಿಎಂ ಅಶೋಕ್ ಗೆಹ್ಲೋಟ್ ರ ಸಹೋದರನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ರೇಡ್ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಕೇಂದ್ರ ಸರ್ಕಾರ ದೇಶದಲ್ಲಿ ರೇಡ್ ರಾಜ್’ ನಿರ್ಮಿಸಿದೆ. ಇಂಥಹ ಬೆದರಿಕೆಗಳಿಗೆ ಕಾಂಗ್ರೆಸ್ ಜಗ್ಗುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ಸುರ್ಜೇವಾಲಾ ಉತ್ತರಪ್ರದೇಶದಲ್ಲಿ ಗುಂಡಾರಾಜ್, ಜಂಗಲ್ ರಾಜ್ಇದೆ. ಮೋದಿ ಅವರು ಭಾರತದಲ್ಲಿ ರೇಡ್ ರಾಜ್ ನಿರ್ಮಿಸುತ್ತಿದ್ದಾರೆ. ಕಾಂಗ್ರೆಸ್ ಇದಕ್ಕೆ ಹೆದರುವುದಿಲ್ಲ. ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತಂತ್ರವೂ ಸಕ್ಸಸ್ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಪ್ರಧಾನಿ ಭೇಟಿಯಾಗಲು ಸಮಯ ಕೋರಿದ ಎಐಸಿಸಿ ಅಧ್ಯಕ್ಷ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ಮೋದಿ ಅವರು...