belagavi ಎಂಇಎಸ್ ಉದ್ಧಟತನ : ಸಿಡಿದೆದ್ದ ಕನ್ನಡಪರ ಸಂಘಟನೆಗಳು
ಬೆಳಗಾವಿ : ಜಿಲ್ಲೆಯಲ್ಲಿ ಎಂಇಎಸ್ ಪುಂಡರ ಉದ್ದಟತನ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ನಾಳೆ ಬೆಳಗಾವಿ ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಿವೆ.
ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇದರಲ್ಲಿ ಸಾವಿರಾರು ಕನ್ನಡ ಹೋರಾಟಗಾರರು ಭಾಗಿಯಾಗಲಿದ್ದಾರೆ.
ಬೆಳಗಾವಿ ಗಡಿಭಾಗದಲ್ಲಿ ಕನ್ನಡದ ಶಾಲು ಹಾಗೂ ಬಾವುಟ ಹಿಡಿದು ಬಂದವರ ಮೇಲೆ ಹಲ್ಲೆ ನಡೆಸುವುದಾಗಿ ಎಂಇಎಸ್ ಪುಂಡನೊಬ್ಬ ನಾಲಿಗೆ ಹರಿಬಿಟ್ಟಿದ್ದಾನೆ.
ಈ ಹಿನ್ನೆಲೆ ಬೆಳಗಾವಿಯಲ್ಲಿ ಕನ್ನಡಿಗರ ಶಕ್ತಿ ಪ್ರದರ್ಶಿಸಲು ಕನ್ನಡ ಸಂಘಟನೆಗಳು ಮುಂದಾಗಿವೆ.
ನಾಳೆ ರಾಜ್ಯದ ಮೂಲೆ ಮೂಲೆಯಿಂದ ಕನ್ನಡ ಪರ ಕಾರ್ಯಕರ್ತರು ಬೆಳಗಾವಿಯಲ್ಲಿ ಜಮಾವಣೆಗೊಳ್ಳಲಿದ್ದಾರೆ.
ಬಳಿಕ ಮಹಾರಾಷ್ಟ್ರ ಗಡಿಗೆ ಕನ್ನಡ ಶಾಲು ಹಾಗೂ ಬಾವುಟ ಹಿಡಿದು ನುಗ್ಗಲಿದ್ದಾರೆ.
ಸ್ವಾಭಿಮಾನಿ ಕನ್ನಡಿಗರ ಜಾಥಾ ಹೆಸರಿನಲ್ಲಿ ಬೆಳಗಾವಿಗೆ ಕನ್ನಡ ಪರ ಸಂಘಟನೆಗಳು ಬೆಳಗಾವಿಗೆ ತೆರಳಿವೆ.