ಬೆಳಗಾವಿ: ಅರಭಾವಿ (Arabhavi Mutt) ದುರದುಂಡೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ (64) (Siddalinga Swamiji) ಹೃದಯಾಘಾತ(Heart Attack) ಕ್ಕೆ ಬಲಿಯಾಗಿದ್ದಾರೆ.
ಸ್ವಾಮೀಜಿ ಮಠದಲ್ಲಿದ್ದ ಸಂದರ್ಭದಲ್ಲಿಯೇ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಗೋಕಾಕ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.
ಸ್ವಾಮೀಜಿ ನಿಧನದಿಂದಾಗಿ ಭಕ್ತ ಸಮೂಹ ಶೋಕ ಸಾಗರದಲ್ಲಿ ಮುಳುಗಿದೆ. ಈ ಮಠಕ್ಕೆ ರಾಜ್ಯ ಅಷ್ಟೇ ಅಲ್ಲದೇ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಮಠಕ್ಕೆ ಭಕ್ತರು ಆಗಮಿಸುತ್ತಿದ್ದು, ಅಂತಿಮ ವಿಧಿ-ವಿಧಾನಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.