ಮುಂಬೈ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೇರಿ 9 ಮಂದಿ ಇಂದು ಮಧ್ಯಾಹ್ನ 1 ಗಂಟೆಗೆ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇ 14ರಂದು ಒಂಬತ್ತು ಜನ ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾಲಿಯಿದ್ದ ಒಂಬತ್ತು ಸ್ಥಾನಗಳಿಗೆ ಕೇವಲ ಒಂಬತ್ತು ಜನರು ಮಾತ್ರವೇ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಮತದಾನದ ಫಲಿತಾಂಶವನ್ನು ಅಂದೇ ಘೋಷಿಸಲಾಯಿತು.
ಶಿವಸೇನೆಯಿಂದ ಠಾಕ್ರೆ ಹೊರತಾಗಿ ನೀಲಂ ಗೊರ್ಹೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಗೋಪಿಚಂದ್ ಪಡಲ್ಕರ್, ಪ್ರವಿಣ್ ದಾಟ್ಕೆ, ರಂಜೀತ್ಸಿನ್ಹ ಮೋಹಿತ್ ಪಾಟೀಲ್ ಮತ್ತ ರಮೇಶ್ ಕರದ್ ಆಯ್ಕೆಯಾಗಿದ್ದಾರೆ.