ಬಿಜೆಪಿ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆಯಲ್ಲಿದೆ : ಟಿ.ಬಿ.ಜಯಚಂದ್ರ
ತುಮಕೂರು : ಬಿಜೆಪಿ ಪಕ್ಷಕ್ಕೆ ಶಿರಾ ಕ್ಷೇತ್ರದಲ್ಲಿ ಅವಕಾಶವಿಲ್ಲ. ಹಾಗಿದ್ದರೂ ತೋಳ್ಬಲ ಹಾಗೂ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆ ಹೊಂದಿದ್ದಾರೆ ಎಂದು ಶಿರಾ ಉಪಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಶಿರಾ ನಗರದಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟಿ.ಬಿ.ಜಯಚಂದ್ರ, ನಾನು ನನ್ನ ಪ್ರಯತ್ನ ಮಾಡಿದ್ದೇನೆ. ಉಳಿದದ್ದು ಮತದಾರರಿಗೆ ಬಿಟ್ಟಂತಹ ವಿಚಾರ.
ನಿನ್ನೆ ರಾತ್ರಿವರೆಗೂ ಮತದಾರರ ಮನೆ- ಮನಗಳನ್ನು ತಲುಪುವಂತಹ ಪ್ರಯತ್ನ ಮಾಡಿದ್ದೇನೆ. ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ತಿಳಿಸಿದರು.
ನಾನು ಈ ಚುನಾವಣೆಯನ್ನು ವಿಶೇಷವಾದ ಚುನಾವಣೆ ಎಂದು ಭಾವಿಸುತ್ತೇನೆ. ಮತದಾರರು ತೋರಿಸಿದಂತಹ ಪ್ರೀತಿ – ವಿಶ್ವಾಸ ಸಾಕಷ್ಟು ಸಂತಸ ಉಂಟುಮಾಡಿದೆ. 2008ರಲ್ಲಿ ನನಗೆ ಶಿರಾದಲ್ಲಿ ಸಿಕ್ಕಿದ ಸ್ಪಂದನೆ ಈಗಲೂ ಸಿಗುತ್ತಿದೆ ಎಂದು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಜಯಚಂದ್ರ, ಹಾಸನ ಮತ್ತು ಕೆಆರ್ ಪೇಟೆಯಿಂದ ಬಂದಂತಹ ಜನರನ್ನು ಶಿರಾ ವಿಧಾನಸಭಾ ಕ್ಷೇತ್ರದ ಮತದಾರರು ಕೂಡಿಹಾಕಿ ಕ್ಷೇತ್ರದಿಂದ ಓಡಿಸಿದ್ದಾರೆ.
ಇದನ್ನೂ ಓದಿ : ಸ್ಯಾನಿಟೈಸರ್ ಬಾಟಲ್ ಮೇಲೆ ಬಿಜೆಪಿ ಅಭ್ಯರ್ಥಿ ಚಿತ್ರ
ಇದು ಬಿಜೆಪಿಯ ಸಂಸ್ಕøತಿ. ಇವೆಲ್ಲವನ್ನು ಗಮನಿಸಿದರೆ ಬೇಸರವೆನಿಸುತ್ತದೆ. ಬಿಜೆಪಿ ಪಕ್ಷಕ್ಕೆ ಶಿರಾ ಕ್ಷೇತ್ರದಲ್ಲಿ ಅವಕಾಶವಿಲ್ಲ. ಹಾಗಿದ್ದರೂ ತೋಳ್ಬಲ ಹಾಗೂ ಹಣಬಲದಿಂದ ಗೆಲ್ಲುತ್ತೇವೆ ಎಂಬ ಭಾವನೆ ಹೊಂದಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಈ ಕುರಿತಂತೆ ದೂರು ಕೂಡಾ ನೀಡಿದ್ದೇನೆ ಎಂದು ತಿಳಿಸಿದರು.
ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.
ಶಿರಾ ಉಪಕಣದಲ್ಲಿ 17 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಕ್ಷೇತ್ರದಾದ್ಯಂತ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ : ಉಪಚುನಾವಣೆ : ತಪ್ಪದೇ ಮತ ಚಲಾಯಿಸಿ ಎಂದು ಸಿಎಂ ಮನವಿ
ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel