ಮೈಸೂರು: ಜಾತಿನಿಂದನೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಟಿ.ನರಸೀಪುರ ತಹಶೀಲ್ದಾರ್ ನಾಗೇಶ್ ಕ್ಷಮೆ ಕೇಳಿದ್ದಾರೆ.
ನನ್ನ ಬಾಯ್ತಪ್ಪಿನಿಂದ ಆಗಿರುವ ಪ್ರಮಾದವನ್ನು ಕ್ಷಮಿಸಬೇಕು. ಪದ ಉಚ್ಛಾರಣೆಯಲ್ಲಿ ಲೋಪವಾಗಿದೆ. ಒಂದು ವೇಳೆ ನನ್ನ ಮಾತಿನಿಂದ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ನಾಗೇಶ್ ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನವೇ ನನ್ನ ವೃತ್ತಿಗೆ ಸ್ಫೂರ್ತಿ. ಪ್ರಜಾಪ್ರಭುತ್ವ ಭಾರತದಲ್ಲಿ ನಾವೆಲ್ಲರೂ ಸಮಾನರು ಎಂಬ ಭಾವನೆ ನನಗಿದೆ. ನಾವೆಲ್ಲರೂ ತಾಲೂಕಿನ ಅಭಿವೃದ್ಧಿಗೆ ಶ್ರಮಿಸೋಣ. ಹೀಗಾಗಿ ಕೆಂಪೇಗೌಡ ದಿನಾಚರಣೆ ವೇಳೆ ನಾನು ಬಾಯಿ ತಪ್ಪಿ ಮಾತನಾಡಿರುವುದಕ್ಕೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.
ತಾಲೂಕು ದಂಡಾಧಿಕಾರಿ ನಾಗೇಶ್ ವಿರುದ್ಧ ದಲಿತ ಸಂಘಟನೆಗಳು ಜಾತಿನಿಂದನೆ ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಕ್ಷಮೆ ಕೇಳಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








