ಟಿ 20 ವಿಶ್ವಕಪ್ 2022ಕ್ಕೆ ಇನ್ನೂ ನಾಲ್ಕು ದಿನಗಳು ಮಾತ್ರ ಬಾಕಿ ಇದೆ.
ಈ ಗ್ಯಾಪ್ ನಲ್ಲಿ ಬಲಿಷ್ಠ ಟೀಂ ಇಂಡಿಯಾವನ್ನು ಕಟ್ಟಲು ಬಿಸಿಸಿಐ ಪ್ಲಾನ್ ಮಾಡಿಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ವಿಶ್ವಕಪ್ ಗೆ ಟೀಂ ಇಂಡಿಯಾ ತಯಾರಾಗುತ್ತಿದೆ.
ಆ ಸಿರೀಸ್ ನಲ್ಲಿ ಇಶಾನ್ ಕಿಶನ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್ ಸೂಪರ್ ಪ್ರದರ್ಶನ ನೀಡಿದ್ದು, ವಿಶ್ವಕಪ್ ತಂಡದಲ್ಲಿ ತಮಗೆ ಅವಕಾಶ ನೀಡಲೇಬೇಕು ಎಂದು ಸಾರಿದ್ದಾರೆ.
ಇನ್ನು ಐರ್ಲೆಂಡ್ ವಿರುದ್ಧದ ಸರಣಿ ಕೂಡ ವಿಶ್ವಕಪ್ ಪ್ಲಾನ್ ನಲ್ಲಿ ಒಂದಾಗಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟರ್ ಸಂಜಯ್ ಮಂಜ್ರೇಕರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಆಸಕ್ತಿದಾಯಕ ಹೇಳಿಕೆಗಳನ್ನು ನೀಡಿದ್ದಾರೆ.
t20-wc-2022-sanjay-manjrekar-feel-axar-patel-picked-over-jadeja saaksha tv
ಮುಂಬರುವ ಟಿ 20 ವಿಶ್ವಕಪ್ ಗಾಗಿ ಜಡೇಜಾ ಸ್ಥಾನದಲ್ಲಿ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಿದರೇ ಚೆನ್ನಾಗಿರುತ್ತದೆ ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ. ಒಂದು ವಿಷಯ ಕ್ಲಿಯರ್ ಆಗಿದೆ. ಕಾರ್ತಿಕ್ ಆರು ಇಲ್ಲವೇ ಏಳನೇ ಸ್ಥಾನದಲ್ಲಿ ಬಂದು ಫಿನಿಷಿಂಗ್ ಕೆಲಸ ಮಾಡುತ್ತಾರೆ. ಇದು ಜಡೇಜಾವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈಗಾಗಲೇ ಮೊದಲ ನಾಲ್ಕು ಸ್ಥಾನಗಳು ಫುಲ್ ಫಿಲ್ ಆಗಿದೆ. ಹೀಗಾಗಿ ಐದು, ಆರು, ಏಳನೇ ಸ್ಥಾನಕ್ಕಾಗಿ ಪೈಪೋಟಿದೆ. ದಿನೇಶ್ ಕಾರ್ತಿಕ್ ಗೂ ಮುನ್ನಾ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಗೆ ಬರುತ್ತಾರೆ. ಜೊತೆ ರಿಷಬ್ ಪಂತ್ ಕೂಡ.
ಈ ಮೂವರು ಪ್ಲೇಯಿಂಗ್ ಇಲೆವೆನ್ ನಲ್ಲಿದ್ದಾಗ ಜಡೇಜಾಗೆ ಅವಕಾಶ ಸಿಗೋದು ಕಷ್ಟ ಸಾಧ್ಯ. ಹಾಗಾಗಿಯೇ ಜಡೇಜಾ ಸ್ಥಾನದಲ್ಲಿ ಅಕ್ಷರ್ ಪಟೇಲ್ ಅವರಿಗೆ ಚಾನ್ಸ್ ಕೊಡಬೇಕು ಎಂದು ಮಂಜ್ರೇಕರ್ ಹೇಳಿದ್ದಾರೆ.
ಇನ್ನು ರವೀಂದ್ರ ಜಡೇಜಾ ಒಳ್ಳೆಯ ಆಲ್ ರೌಂಡರ್. ಆದ್ರೂ ಟಿ 20 ವಿಶ್ವಕಪ್ ಗೆ ಫರ್ಪೆಕ್ಟ್ ತಂಡವನ್ನು ಆಯ್ಕೆ ಮಾಡೋದಕ್ಕೆ ತ್ಯಾಗಗಳು ಮಾಡಲೇಬೇಕು ಎಂದಿದ್ದಾರೆ.
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...
ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...
ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...
ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...
ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...