ಹೊಸದಿಲ್ಲಿ, ಮೇ 14 : ಇಂದು ತಬ್ಲಿಘಿ ಜಮಾತ್ ಸದಸ್ಯರು ಕ್ವಾರಂಟೈನ್ ಅವಧಿ ಮುಗಿಸಿದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 35 ದಿನಗಳಿಂದ ಕ್ವಾರಂಟೈನ್ ನಲ್ಲಿ ಇದ್ದರೂ ತಬ್ಲಿಘಿ ಜಮಾತ್ ಸದಸ್ಯರನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಜಮಾತ್ ಸದಸ್ಯರು ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯ ನಿಜಾಮುದ್ದೀನ್ ನಲ್ಲಿ ದೇಶದಾದ್ಯಂತ ಕೊರೊನಾ ಸೋಂಕು ಹರಡಲು ಆರಂಭಿಸಿದ ಅವಧಿಯಲ್ಲಿ ಹಮ್ಮಿಕೊಂಡಿದ್ದ ತಬ್ಲಿಘಿ ಜಮಾತ್ ನ ಧಾರ್ಮಿಕ ಸಮಾವೇಶ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಮುಸ್ಲಿಂ ಸಮುದಾಯದ ಜನರು ಪಾಲ್ಗೊಂಡಿದ್ದರು. ಈ ಸಮಾವೇಶದಲ್ಲಿ ಪಾಲ್ಗೊಂಡ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಸಾವನ್ನಪ್ಪುತ್ತಿದ್ದಂತೆ, ಸರ್ಕಾರಗಳು ಮುಂಜಾಗ್ರತಾ ಕ್ರಮವಾಗಿ ಸಮಾವೇಶದಲ್ಲಿ ಪಾಲ್ಗೊಂಡ ಎಲ್ಲರಿಗೂ ಕೊರೊನಾ ಪರೀಕ್ಷೆಗೆ ನಡೆಸಿ ಕ್ವಾರಂಟೈನ್ ಗೆ ಒಳಪಡಿಸಿತು. ಇದೀಗ ಕಳೆದ 35 ದಿನಗಳಿಂದ ತಬ್ಲಿಘಿ ಜಮಾತ್ ಸದಸ್ಯರನ್ನು ಕ್ವಾರಂಟೈನ್ ನಲ್ಲಿರಿಸಿದ್ದು, ಕೊರೊನಾ ಪರೀಕ್ಷೆಯ ವರದಿಯಲ್ಲೂ ನೆಗೆಟಿವ್ ಬಂದಿದೆ. ಆದರೂ ಕ್ವಾರಂಟೈನ್ ಅವಧಿ ಮುಕ್ತಾಯಗೊಳಿಸಿಲ್ಲ ಎಂದು ಜಮಾತ್ ಸದಸ್ಯರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕ್ವಾರಂಟೈನ್ ಅವಧಿ ಮುಗಿಸಿದವರನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ನಡೆಸಲಿದೆ .
ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.
56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...








