ಲಖನೌ : ಭಾರತದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಲು ತಬ್ಲಿಘಿ ಜಮಾತ್ ಸದಸ್ಯರೇ ಕಾರಣ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದು, ಸೋಂಕಿಗೆ ಒಳಗಾಗುವುದು ಅಪರಾಧವಲ್ಲ ಆದರೆ ಅದು ತಮಗೆ ಬಂದಿದೆ ಎಂಬುವುದನ್ನ ಮರೆಮಾಚುವುದು ಖಂಡಿತ ಅಪರಾಧ ಎಂದು ಹೇಳಿದ್ದಾರೆ.
ನಿನ್ನೆ ಸುದ್ದಿವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಹಬ್ಬಿಸುವಲ್ಲಿ ತಬ್ಲಿಘಿ ಜಮಾತ್ ಪಾತ್ರ ಅತ್ಯಂತ ಖಂಡನೀಯ. ಸೋಂಕು ದೇಹಕ್ಕೆ ತಾಗಿಸಿಕೊಳ್ಳುವುದು ಅಪರಾಧವಲ್ಲ. ಆದರೆ ಈ ರೋಗವನ್ನು ಬೇರೊಬ್ಬರಿಗೆ ಹರಡುವುದು ಖಂಡಿತವಾಗಿಯೂ ತಪ್ಪು. ತಬ್ಲಿಘಿ ಜಮಾತ್ ಗೆ ಸಂಬಂಧಪಟ್ಟವರು ಈ ಬಹುದೊಡ್ಡ ಅಪರಾಧವನ್ನು ಮಾಡಿದ್ದಾರೆ ಎಂದು ದೂರಿದರು.
ಇನ್ನು ಉತ್ತರ ಪ್ರದೇಶ ಮತ್ತು ಬೇರೆ ಕಡೆಗಳಲ್ಲಿ ಕೊರೊನಾ ವೈರಸ್ ಹಬ್ಬಲು ತಬ್ಲಿಘಿ ಜಮಾತ್ ಕಾರಣವೆಂದು ತಿಳಿದುಬಂದಿದೆ. ತಬ್ಲಿಘಿ ಸದಸ್ಯರು ಆರಂಭದಲ್ಲಿ ಮರೆಮಾಚದೆ ವೈರಸ್ ಹಬ್ಬುವುದನ್ನು ತಡೆದಿದ್ದರೆ ಖಂಡಿತವಾಗಿಯೂ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.