ಊಟಕ್ಕೆಂದು ಕರೆದುಕೊಂಡು ಹೋಗಿ ವ್ಯಕ್ತಿಯ ಹತ್ಯೆ
ಬೀದರ: ಊಟಕ್ಕೆಂದು ಡಾಬಾಗೆ ಕರೆದುಕೊಂಡು ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೀದರ್ ಜೆಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದ ಬಳಿ ನಡೆದಿದೆ.
ಅಂತೇಷ್ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆರೋಪಿ ಪ್ರವೀಣ್ ಕುಮಾರ ಹಳೆಯ ವೈಷಮ್ಯದ ಹಿನ್ನಲೆ ಗೆಳೆಯ ಅಂತೇಷ್ ನನ್ನು ಹತ್ಯೆ ಮಾಡಿದ್ದಾನೆ. ಪ್ರಕರಣ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ನಿವಾಸಿಗಳಾದ ಅಂತೇಷ್ ಮತ್ತು ಪ್ರವೀಣ್ ಕುಮಾರ್ ಸ್ನೇಹಿತರು. ಪ್ರವೀಣ್ ಕುಮಾರ್ ಅಂತೇಷ್ ನನ್ನು ಊಟಕ್ಕೆಂದು ಡಾಬಾಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಅಂತೇಷ್ ಗೆ, ಪ್ರವೀಣ್ ಕುಮಾರ್ ಕಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸಂತಪೂರ್ ಪೊಲೀಸ್ ಪೊಲೀಸರು, ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ