ಅಸುರನ್ ಖ್ಯಾತಿಯ ತಮಿಳು ನಟ ನಿತೀಶ್ ವೀರಾ ಕೊರೊನಾಗೆ ಬಲಿ
ಚೆನ್ನೈ: ತಮಿಳಿನ ಅಸುರನ್ ಖ್ಯಾತಿಯ ನಟ ನಿತೀಶ್ ವೀರಾ ಕೊರೊನಾಗೆ ಬಲಿಯಾಗಿದ್ದಾರೆ. 45 ವರ್ಷದ ನಿತೀಶ್ ವೀರಾಗೆ ಕೆಲ ದಿನಗಳ ಹಿಂದೆಯಷ್ಟೇ ಕೋವಿಡ್ ಪಾಸಿಟಿವ್ ಇರುವುದು ಖಚಿತವಾಗಿತ್ತು. ಚೆನ್ನೈ ಆಸ್ಪತ್ರೆಯಲ್ಲಿ ದಾಖಲಾಗಿ ನಿತೀಶ್ ವೀರಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊಎನೆಯುಸಿರೆಳೆದಿದ್ದಾರೆ.
ಕಳೆದ 20 ವರ್ಷಗಳಿಂದ ಕಾಲಿವುಡ್ ನಲ್ಲಿ ನಿತೀಶ್ ವೀರಾ ಸಕ್ರಿಯರಾಗಿದ್ದರು. ಪುದುಪೇಟೈ, ಪೇರರಸು, ವಲ್ಲರಸು ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅಂದ್ಹಾಗೆ ನಿತೀಶ್ ವೀರಾ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರದಲ್ಲಿ ಕಾತಿರಾವಣ್ ಪಾತ್ರಧಾರಿಯಾಗಿ ನಟಿಸಿ ಮಿಂಚಿದ್ದರು. ಬಳಿಕ ಅಸುರನ್ ಚಿತ್ರದಲ್ಲೂ ಪಾಂಡಿಯನ್ ಆಗಿ ಅಭಿನಯಿಸಿ ಶೈನ್ ಆಗಿದ್ದರು. ನಿತೀಶ್ ವೀರಾ ನಿಧನಕ್ಕೆ ಕಾಲಿವುಡ್ ಮಂದಿ ಕಂಬನಿ ಮಿಡಿದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.