Tamilnadu : ನಾಲ್ವರು ವೃದ್ಧ ಮಹಿಳೆಯರ ಸಾವಿಗೆ ಕಾರಣವಾದ ಸೀರೆ ಹಂಚಿಕೆ…
ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ವನ್ನಿಯಂಬಾಡಿ ಬಳಿ ಕಾಲ್ತುಳಿತದಲ್ಲಿ ನಾಲ್ವರು ವೃದ್ಧ ಮಹಿಳೆಯರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಸೀರೆ ವಿತರಣೆ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ ಈ ಅವಘಡ ನಡೆದಿದೆ.
ಪೊಲೀಸರ ಪ್ರಕಾರ, ‘ತೈಪೂಸಂ’ ಹಬ್ಬದ ಪ್ರಯುಕ್ತ ಅಯ್ಯಪ್ಪನ್ ಎಂಬುವವರು ಉಚಿತ ಸೀರೆ ಮತ್ತು ಪಂಚೆ ವಿತರಿಸಲು ಮುಂದಾಗಿದ್ದರು. ಹಾಗಾಗಿ ಟೋಕನ್ ಗಳನ್ನ ಸಂಗ್ರಹಿಸಲು ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು.
ಉಚಿತ ಸೀರೆ ಮತ್ತು ಪಂಚೆ ಪಡೆದುಕೊಳ್ಳುವ ದಾವಂತದಲ್ಲಿ ನೂಕು ನುಗ್ಗಲು ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ. ಘಟೆನೆಯಲ್ಲಿ ನಾಲ್ವರು ವೃದ್ಧ ಮಹಿಳೆಯರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಆಸ್ಪತ್ರಗೆ ಸಾಗಿಸಲಾಗಿದೆ.
“ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿರುಪತ್ತೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ಮಹಿಳೆಯರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Tamil Nadu : Saree distribution which led to the death of four elderly women…